i
ಜಿನುಗು ಮಳೆ, ಅತಿ ಚಳಿ ಹಾಗೂ ಶೀತ ಗಾಳಿಗೆ ತತ್ತರಿಸಿದ ಜನತೆ…
ಚಂದ್ರವಳ್ಳಿ ನ್ಯೂಸ್, ಕೋಲಾರ:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಸತತವಾಗಿ ಜಿನುಗು ಮಳೆ, ತೀವ್ರ ಚಳಿ ಹಾಗೂ ಶೀತ ಗಾಳಿ ಹೆಚ್ಚಾಗಿದ್ದರಿಂದ ಜನತೆ ತತ್ತರಿಸಿ ಹೋಗಿದ್ದಾರೆ.
ಅತಿಯಾದ ಚಳಿ ದಾಖಲಾದ ಕಾರಣ ಮುಂಜಾಗ್ರತೆಗಾಗಿ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಕೋಲಾರ ಜಿಲ್ಲೆಯ ಶಾಲೆಗಳಿಗೆ ಕೋಲಾರ ಡಿಡಿಪಿಐ ಕೃಷ್ಣಮೂರ್ತಿ ರಜೆ ನೀಡಿದ್ದಾರೆ.
ಭಾರಿ ಮಳೆ ಸಾಧ್ಯತೆ-
ರಾಜ್ಯದ 15 ಜಿಲ್ಲೆಗಳಲ್ಲಿ ಸರಿಸುಮಾರು 11.5 ಸೆಂಟಿ ಮೀಟರ್ವರೆಗೆ ಮಳೆ ಬರುವ ಮುನ್ಸೂಚನೆ ಇದೆ. ಈ ಎರಡು ದಿನ ಹೊರತಾಗಿ ಉಳಿದ ದಿನಗಳಲ್ಲಿ ಅಷ್ಟಾಗಿ ಮಳೆ ಆಗದೇ ಹಗುರವಾಗಿ ಬರಬಹುದು ಎಂದು ಎನ್ನಲಾಗಿದೆ. ಎಲ್ಲಡೆ ಚಳಿ ಹಾಗೂ ಮೋಡ ಕವಿದ ಮಬ್ಬು ವಾತಾವರಣ ನಿರ್ಮಾಣವಾಗಿದೆ.
ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ ತಾಪಮಾನ 6.6ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.