i
ಶಿಕ್ಷಕರು, ರೆಡ್ಕ್ರಾಸ್ ಸೇವಾಕರ್ತರು ಮಾನವೀಯ ಮೌಲ್ಯ ರೂಢಿಸಿಕೊಳ್ಳಿ-ಎಡಿಸಿ ಬಾಲಕೃಷ್ಣ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಿಸ್ವಾರ್ಥ ಸೇವೆಯ ಜೊತೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಪ್ರೌಢಶಾಲಾ ಶಿಕ್ಷಕರುಗಳಿಗೆ ಹಾಗೂ ಕಿರಿಯ ರೆಡ್ಕ್ರಾಸ್ ಕೌನ್ಸಿಲರ್ಗಳಿಗೆ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವೈ.ಆರ್.ಆದಿಶೇಷ ರೋಟರಿ ಬಾಲಭವನದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹಾಗೂ ಕಿರಿಯ ರೆಡ್ಕ್ರಾಸ್ ಕೌನ್ಸಿಲ್ರಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಕ್ತದಾನ, ಉಚಿತ ಆರೋಗ್ಯ ತರಬೇತಿ ಶಿಬಿರಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದೆ. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿರುವ ನೀವುಗಳು ಸಮಾಜ ಸೇವೆಯ ಮೂಲಕ ಪರೋಪಕಾರದ ಗುಣ ಬೆಳೆಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ ವೈಯಕ್ತಿಕ ಸ್ವಚ್ಚತೆ, ಪರಿಸರ ನೈರ್ಮಲ್ಯ
ಕಾಪಾಡಿಕೊಳ್ಳುವುದರಿಂದ ರೋಗಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದು ಕಡಿಮೆಯಾಗುತ್ತದೆ. ಮಾರಕ ರೋಗಗಳ ಕುರಿತು ಯುವಜನತೆಯಲ್ಲಿ ಅರಿವು ಮೂಡಿಸುತ್ತ ರಕ್ತದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.
ರಾಷ್ಟ್ರೀಯ ತರಬೇತುದಾರ ಡಾ.ವಿ.ಎಲ್.ಎಸ್.ಕುಮಾರ್ ಪ್ರಥಮ ಚಿಕಿತ್ಸೆ ಸಿ.ಪಿ.ಆರ್.ರೆಡ್ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಉಪನ್ಯಾಸ ನೀಡಿದರು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನೀಲಕಂಠಾಚಾರ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಕಿರಿಯ ರೆಡ್ಕ್ರಾಸ್ ಉಪ ಸಮಿತಿಯ ಅರುಣ್ಕುಮಾರ್, ಗಾಯತ್ರಿ ಶಿವರಾಂ, ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಾರ್ಯದರ್ಶಿ ಮಜಹರ್ಉಲ್ಲಾ, ಯುವ ರೆಡ್ಕ್ರಾಸ್ ಸಂಯೋಜಕ ಶ್ರೀನಿವಾಸ್ ಮಳಲಿ, ಭರತ್ ಶಿವಕುಮಾರ್ ವೇದಿಕೆಯಲ್ಲಿದ್ದರು.