i
ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನಗರ ವಾರ್ಡ್ ಗಳಿಗೆ ನೂತನ ಅಧ್ಯಕ್ಷರುಗಳ ನೇಮಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರಕರೆಯಲಾಗಿದ್ದ ಸಭೆಯಲ್ಲಿ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ನಗರದ 35 ವಾರ್ಡ್ ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಾತಿ ಮಾಡಿ KPCC ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ರವರು ಆದೇಶ ಹೊರಡಿಸಿದರು.
ಈ ಕಾರ್ಯಕ್ರಮವು ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು ಲಕ್ಷ್ಮೀಕಾಂತ್ ರವರ ಅಧ್ಯಕ್ಷತೆಯಲ್ಲಿ ಮತ್ತು ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ R. ಪ್ರಕಾಶ್ ರವರ ನೇತೃತ್ವದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಕೆ ತಾಜ್ ಪೀರ್,
ಡಿಸಿಸಿ ಕಾರ್ಯಾಧ್ಯಕ್ಷ ಕೆ ಎಂ ಹಾಲಸ್ವಾಮಿ,
2018 ರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. H.A. ಷಣ್ಮುಖಪ್ಪ ರವರು
ಡಿಸಿಸಿ ಉಪಾಧ್ಯಕ್ಷ D.T. ವೆಂಕಟೇಶ್ ಹಾಗೂ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೆ ಪಿ ಸಂಪತ್ ಕುಮಾರ್ ಹಾಗೂ ಡಿ ಎನ್ ಮೈಲಾರಪ್ಪ,ವಿ ವಿಧ ಘಟಕಗಳ ಜಿಲ್ಲಾ ಅಧ್ಯಕ್ಷರುಗಳು,ಕಾಂಗ್ರೆಸ್ ಮುಖಂಡರುಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನೂತಾನ ಪದಾಧಿಕಾರಿಗಳು ಎಲ್ಲರಿಗೂ ಶುಭ ಹಾರೈಸಲಾಯಿತು.