i
ಮುರುಘಾ ಶರಣರನ್ನು ಗೆಲ್ಲಿಗೇರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕಾರಾಗೃಹದಲ್ಲಿರುವ ಮುರುಘಾ ಶರಣರ ಲೈಂಗಿಕ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿಯಿಂದ ಡಿ.21 ರಂದು ಬೆಳಿಗ್ಗೆ 11 ಗಂಟೆಗೆ ಒನಕೆ ಓಬವ್ವ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ. ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುರುಘಾಶರಣರ ವಿರುದ್ದ ದೂರು ನೀಡಿದ ಸಂತ್ರಸ್ಥ ಬಾಲಕಿಯ ತಾಯಿಯನ್ನು ಪೊಲೀಸರು 21 ದಿನಗಳ ಕಾಲ ವಶದಲ್ಲಿಟ್ಟುಕೊಂಡು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ್ ಬಿದರಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಇವರುಗಳು ಈ
ಹಗರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಪೊಲೀಸರ ಮೇಲೆ ಒತ್ತಡ ಹಾಕಿ ಕೇಸನ್ನು ಮುಚ್ಚಿ ಹಾಕಿಸುವ ಕುತಂತ್ರ ನಡೆಸುತ್ತಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಕೇಂದ್ರ ಮಂತ್ರಿ ಇವರುಗಳ್ಯಾರು ಶರಣರ ವಿರುದ್ದ ಧ್ವನಿ ಎತ್ತುತ್ತಿಲ್ಲ. ದೂರುದಾರರ ಮೇಲೆಯೇ ಪೊಲೀಸ್ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶರಣರನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.
ಮುರುಘಾಶರಣರು ಹಣಬಲ, ರಾಜಕೀಯ ಬಲ, ಮಠಬಲವಿಟ್ಟುಕೊಂಡು ಕೇಸು ಮುಚ್ಚಿಹಾಕಲು ಹೊರಟಿದ್ದಾರೆ. ಉಚ್ಚನ್ಯಾಯಾಲಯದ ಲಿಂಗಾಯಿತರಲ್ಲದ ಹಾಲಿ ನ್ಯಾಯಾಧೀಶರೊಬ್ಬರಿಂದ ಹಗರಣದ ಸಂಪೂರ್ಣ ತನಿಖೆಯಾಗಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ನಾಲ್ಕೈದು ಸಾವಿರ ಜನ ಸೇರುವ ನಿರೀಕ್ಷೆಯಿದೆ. ವಿವಿಧ ಸಂಘಟನೆಗಳು ನಮ್ಮ ಹೋರಾಟಕ್ಕೆ ಬೆಂಬಲಿಸಲಿವೆ ಎಂದು ಹೇಳಿದರು.
ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಪ್ರಕಾಶ್, ತಾಳಿಕೆರೆ ಮಂಜುನಾಥ್, ಎಲ್.ಅವಿನಾಶ್, ಹೊಳಿಯಪ್ಪ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.