i
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾಗಿ ಸುಕೋ ಬ್ಯಾಂಕ್ ಪಾಲಯ್ಯ ನೇಮಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಸುಕೋ ಬ್ಯಾಂಕ್ ಆರ್.ಪಾಲಯ್ಯ ನೇಮಕವಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಬಿ.ಸಿ.ಹನುಮಂತೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪಾಲಯ್ಯ ಇವರನ್ನು ಜಿಲ್ಲಾಧ್ಯಕ್ಷ ಎ.ಮುರುಳಿ ನೇಮಕ ಮಾಡಿ ಆದೇಶ ಮಾಡಿದ್ದಾರೆ.
ಪ್ರಸ್ತುತ ಹನುಮಂತೇಗೌಡರು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರಿಂದಾಗಿ ಅವರು ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.