i
ಡಿ.18 ರಂದು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ-ಪದಾಧಿಕಾರಿಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ಮಹಿಳಾ ವಿದ್ಯಾರ್ಥಿನಿಯರಿಗೆ ವಸತಿನಿಲಯ ನಿರ್ಮಿಸುವ ಉದ್ದೇಶದಿಂದ ಸ್ಥಳ ವೀಕ್ಷಣೆ ಮಾಡಲು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎನ್ ಬಾಲಕೃಷ್ಣ ಮತ್ತು ಕಾರ್ಯದರ್ಶಿ ಕೋನಪ್ಪ ರೆಡ್ಡಿ ಹಾಗೂ ಪದಾಧಿಕಾರಿಗಳು ಡಿ.18ರಂದು ಭಾನುವಾರ ಸಂಜೆ 4 ಗಂಟೆಗೆ ಚಿತ್ರದುರ್ಗ ನಗರದ ಒಕ್ಕಲಿಗ ಸಂಘದ ಆವರಣಕ್ಕೆ ಆಗಮಿಸಲಿದ್ದು ಸಮುದಾಯ ಎಲ್ಲ ಮುಖಂಡರು ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡುವಂತೆ ರಾಜ್ಯ ಒಕ್ಕಲಿಗ ಸಂಘದ ಚಿತ್ರದುರ್ಗ ಜಿಲ್ಲಾ ನಿರ್ದೇಶಕರು ಹಾಗೂ ದಂತ ಮಹಾವಿದ್ಯಾಲಯ ಕಿಮ್ಸ್ ಅಧ್ಯಕ್ಷ ಬೇತೂರು ಜೆ.ರಾಜು ಮನವಿ ಮಾಡಿದ್ದಾರೆ.
ಬದ್ಧತೆಯ ಮುನ್ನುಡಿ.
ಸಿ ಎನ್ ಬಾಲಕೃಷ್ಣ ರವರು ಶಾಸಕರು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಮತ್ತು ಕೋನಪ್ಪ ರೆಡ್ಡಿ ರವರು ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿಗಳು ಇವರುಗಳು ದಿನಾಂಕ 18-12-2022 ರಂದು ನಾಳೆ ಭಾನುವಾರ ಸಂಜೆ 4 ಗಂಟೆಗೆ ಸರಿಯಾಗಿ ಚಿತ್ರದುರ್ಗ ನಗರದಲ್ಲಿ ಒಕ್ಕಲಿಗರ ಸಂಘದ ಭವನಕ್ಕೆ ಬರುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮತ್ತು ಇನ್ನಿತರ ಜಿಲ್ಲೆಯ ಒಕ್ಕಲಿಗ ಜನಾಂಗದ ವಿದ್ಯಾರ್ಥಿನಿಯರು ಚಿತ್ರದುರ್ಗ ನಗರದಲ್ಲಿ ಓದುವ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿನಿಯರಿಗೆ ಉಪಯುಕ್ತವಾಗುವ ಸಲುವಾಗಿ ರಾಜ್ಯ ಒಕ್ಕಲಿಗರ ಸಂಘದಿಂದ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ನಿರ್ಮಿಸುವ ಉದ್ದೇಶವಿದೆ. ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಿಸಲು ಸೂಕ್ತ ಸ್ಥಳ ಪರಿಶೀಲನೆ ಮಾಡಲು ಬರುತ್ತಿರುವ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಈ ಮಹತ್ವದ ಕಾರ್ಯದಲ್ಲಿ ಚಿತ್ರದುರ್ಗ ಜಿಲ್ಲಾ ಒಕ್ಕಲಿಗ ಸಮುದಾಯದ ಮುಖಂಡರು ಭಾಗವಹಿಸಿ ನಿಮ್ಮ ಸಲಹೆ ಸಹಕಾರ ನೀಡಬೇಕಾಗಿದೆ. ಈ ಒಂದು ಮಹತ್ವದ ಕಾರ್ಯಕ್ಕೆ ಬೇತೂರು ಜೆ ರಾಜು ಇವರು ಮಹತ್ವಾಕಾಂಕ್ಷೆ ಯೋಜನೆಗೆ ಮುನ್ನುಡಿ ಇಟ್ಟಿದ್ದಾರೆ ಎಂದು ರಘುಗೌಡ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.