i
ಚಂದ್ರವಳ್ಳಿಯಲ್ಲಿ ನಡೆದ ಹುಲೇಗೊಂದಿ ಸಿದ್ದೇಶ್ವರಸ್ವಾಮಿ ಕಾರ್ತೀಕೋತ್ಸವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹುಲೇಗೊಂದಿ ಸಿದ್ದೇಶ್ವರಸ್ವಾಮಿ, ಪಂಚಲಿಂಗೇಶ್ವರಸ್ವಾಮಿ ಹಾಗೂ ದವಳೇಶ್ವರಸ್ವಾಮಿಗಳ ಕಡೆ ಕಾರ್ತಿಕ ಮಹೋತ್ಸವ ಚಂದ್ರವಳ್ಳಿಯಲ್ಲಿ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಹುಲೇಗೊಂದಿ ಸಿದ್ದೇಶ್ವರಸ್ವಾಮಿಯನ್ನು ಬಗೆ ಬಗೆಯ ಹೂವು ಹಾಗೂ ಹಾರಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನದ ಮುಂಭಾಗ ಬಾಳೆಕಂಬ, ತಳಿರು ತೋರಣಗಳಿಂದ ಅಲಂಕರಿಸಿ ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿತ್ತು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ದೀಪ ಬೆಳಗುವ ಮೂಲಕ ಕಾರ್ತಿಕೋತ್ಸವ ಉದ್ಘಾಟಿಸಿದರು. ಭೀಮಸಮುದ್ರದ ಜಿ.ಎಸ್.ಅನಿತ್ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಪರಶುರಾಮ್, ಸಿದ್ದೇಶ್ವರಸ್ವಾಮಿ ಭಕ್ತಮಂಡಳಿ ಸಮಿತಿಯ ಅಧ್ಯಕ್ಷ ಬಿ.ಎಸ್.ಸಿದ್ದಪ್ಪ, ಅರ್ಚಕ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶಿವಕುಮಾರ್, ಸರ್ವ ಸದಸ್ಯರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.