i
ಕರ್ನಾಟಕ ಸೇನೆ ಜಿಲ್ಲಾ ಅಧ್ಯಕ್ಷ, ಪದಾಧಿಕಾರಿಗಳ ನೇಮಕ …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆಗೆ ಚಿತ್ರದುರ್ಗ ಜಿಲ್ಲೆಯ ನೂತನ ಪದಾಧಿಕಾರಿಗಳ ಪದಗ್ರಹ ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಅಧ್ಯಕ್ಷತೆಯಲ್ಲಿ ಹಾಗೂ ನಮ್ಮ ಕರ್ನಾಟಕ ಸೇನೆ ರಾಜ್ಯ ಉಪಾಧ್ಯಕ್ಷ ಶಶಿಧರ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕ, ಯುವ ಘಟಕ, ಕಾರ್ಮಿಕದ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಜಿ.ಗುರುಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಟಿ.ಮೋಹನ್, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಟಿ.ನಾಗೇಶ್, ಜಿಲ್ಲಾ ಸಂಚಾಲಕರಾಗಿ ನವೀನ್.ಎಸ್.ಆರ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ಅಂಜಿನಿ, ನಗರಾಧ್ಯಕ್ಷ ಪ್ರಜ್ವಲ್, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ದರ್ಶನ್, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ರೂಪ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಮೂಡಲಗಿರಿ, ಹಿರಿಯೂರು ತಾಲ್ಲೂಕು ಉಪಾಧ್ಯಕ್ಷ ಕಣುಮೇಶ್ರವರನ್ನು ಆಯ್ಕೆ ಮಾಡಿ ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ನಾಡು-ನುಡಿ ಹಿತರಕ್ಷಣೆ ಮಾಡಲು ರಾಜ್ಯಾಧ್ಯಕ್ಷರು ಆದೇಶ ಮಾಡಿರುತ್ತಾರೆ.
ಮುಂಬರುವ ದಿನಗಳಲ್ಲಿ ರಾಜ್ಯದ ಸಮಸ್ಯೆಗಳು ಮತ್ತು ಜಿಲ್ಲೆಯ ಸ್ಥಳೀಯ ಸಮಸ್ಯೆಗಳಿಗೆ ಒತ್ತು ಕೊಟ್ಟು ಹೋರಾಟ ಮಾಡಿ ಜನರಿಗೆ ನ್ಯಾಯ ಒದಗಿಸಿಕೊಡಬೇಕೆಂದು ರಾಜ್ಯಾಧ್ಯಕ್ಷ ಕಿವಿ ಮಾತು ಹೇಳಿದ್ದಾರೆ.