i
ಅದೃಷ್ಟ ಇದ್ದರೆ ನಾನೇ ಮುಂದಿನ ಮುಖ್ಯಮಂತ್ರಿ-ಡಾ.ಪರಮೇಶ್ವರ್…
ಚಂದ್ರವಳ್ಳಿ ನ್ಯೂಸ್, ಮಧುಗಿರಿ:
ನನಗೆ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶವಿದ್ದರೂ ಸ್ವಲ್ಪದರಲ್ಲಿಯೇ ಕೈ ತಪ್ಪಿ ಹೋಗಿದೆ, ಅದೃಷ್ಟವಿದ್ದರೆ ನಾನು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾವುಕರಾಗಿ ಹೇಳಿದರು.
ಮಧುಗಿರಿ ತಾಲೂಕಿನ ಪುರವರ ಹೋಬಳಿ ತಗ್ಗಿಹಳ್ಳಿ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಸಾಧು ನಿವಾಸ ಮತ್ತು ಭೋಜನಾಲಯ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಕೈ ತಪ್ಪಿದೆ. ಈ ಸಲ ಸಿಎಂ ಆಗುವ ಅವಕಾಶವಿದೆ. ನಾನು ಸಿಎಂ ಆಗಲಿ ಬಿಡಲಿ ನನ್ನ ರಾಜಕೀಯ ಸೇವೆ ನಿರಂತರವಾಗಿ ಜನಪರವಾಗಿ ನಡೆಯಲಿದೆ ಎಂದು ತಿಳಿಸಿದರು.
ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಜನ ಸೇವೆ ಮಾಡುತ್ತಾ ಬಂದಿದ್ದೇನೆ. ಈ ಭಾಗದ ಜನತೆ ನನ್ನ ಮೇಲೆ ಅಪಾರ ಪ್ರೀತಿ, ವಿಶ್ವಾಸವಿರಿಸಿ ರಾಜಕೀಯವಾಗಿ ಬೆಳಸಿದ್ದಾರೆ. ಈ ಜನರು ನೀಡಿದ ಪ್ರೀತಿ, ವಿಶ್ವಾಸ ಸಹಕಾರ ಎಂದಿಗೂ ಮರೆಯಲಾರೆ ಎಂದು ಭಾವುಕರಾದರು,