i
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗೆ ಜಾಮೀನು ಮಂಜೂರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಕಾಯ್ದೆ ಅಡಿ ಆರೋಪಿಯಾಗಿ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪಿತ್ತೂರು ಮಾಡಿ ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗೆ ಹೈಕೋರ್ಟ್ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹಿರಿಯ ವಕೀಲ ಹಷ್ಮತ್ ಪಾಷ ಬಸವರಾಜನ್ ಪರವಾಗಿ ವಾದ ಮಂಡಿಸಿ, ನಮ್ಮ ಕಕ್ಷಿದಾರರ ವಿರುದ್ಧ ಹೊರಿಸಲಾಗಿರುವ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ. ಮುರುಘಾ ಮಠದ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಸುಳ್ಳು ದೂರು ದಾಖಲು ಮಾಡಿದ್ದು ಯಾವುದೇ ಕೃತ್ಯ ಎಸಗದಿದ್ದರೂ ನ್ಯಾಯಾಂಗ ಬಂಧನದಲ್ಲಿರಿಸುವುದು ಕಾನೂನು ಬಾಹಿರವಾಗಿದೆ. ಆದ್ದರಿಂದ ಜಾಮೀನು ಮಂಜೂರು ಮಾಡುವಂತೆ ವಾದ ಮಂಡಿಸಿದ್ದರು. ಇವರ ವಾದ ಆಲಿಸಿದ ನ್ಯಾಯಾಲಯ ಎಸ್.ಕೆ.ಬಸವರಾಜನ್ ಅವರಿದಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಮಂಜೂರು ಮಾಡುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಲ್ಲದೆ ಸಿಹಿ ಹಂಚಿಕೆ ಮಾಡಿದ್ದರು. ನ್ಯಾಯಾಲಯಕ್ಕೆ ಡಿ-24 ರಂದು ರಜಾ ಇರುವುದರಿಂದ ಸೋಮವಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆಂದು ಅವರ ಅಭಿಮಾನಿ ಯಶವಂತ್ ತಿಳಿಸಿದ್ದಾರೆ.