i
2ಎಗೆ ಪಂಚಮಸಾಲಿ ಪರಿಣಾಮ ಯೋಚಿಸಲಿ, ಕುಂಚಿಟಿಗರಿಗೆ ಒಬಿಸಿ ನೀಡಲಿ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚುನಾವಣೆ ಸಂದರ್ಭದಲ್ಲಿ ಮೀಸಲಾತಿ ಕಿಚ್ಚು ಹೊತ್ತಿಕೊಂಡಿದೆ. ಎಲ್ಲ ಬಲಿಢ್ಯ ಜಾತಿಗಳು ಮೀಸಲಾತಿಗೆ ಬೇಡಿಕೆ ಇಟ್ಟಿದ್ದು ಸರ್ಕಾರ ಇಕ್ಕಟ್ಟಿನಲ್ಲಿದೆ. ಇದೇ ಸಂದರ್ಭದಲ್ಲಿ ಪಂಚಮಸಾಲಿ ಸಮಾಜ ಪ್ರವರ್ಗ-2ಎಗೆ ಬೇಡಿಕೆ ಇಟ್ಟಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.
ಇಂತಹ ಸಂದಿಗ್ದ ಪರಿಸ್ಥಿತಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಪಂಚಮಸಾಲಿ ಸಮುದಾಯ ವನ್ನು ಪ್ರವರ್ಗ-2ಎಗೆ ಸೇರಿಸುವ ಸಂದರ್ಭದಲ್ಲಿ ಅದೇ ಪ್ರವರ್ಗದಲ್ಲಿರುವ ಇತರರಿಗೆ ಆಗುವ ಪರಿಣಾಮಗಳ ಬಗ್ಗೆ ಕರ್ನಾಟಕ ಸರ್ಕಾರ ಯೋಚಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಕುಂಚಿಟಿಗ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು. ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯಿದೆ, ನಾನು ಒಕ್ಕಲಿಗರಿಗೆ ಶೇ 4 ಮೀಸಲಾತಿ ಕೊಟ್ಟಿದ್ದೆ ಎಂದು ಗೌಡರು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಚರ್ಚೆ ಮಾಡಿ ಬೆಟ್ಟ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. ಕಾಡು ಕುರುಬರು ಹಾಗೂ ಬೆಟ್ಟ ಕುರುಬರನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವುದರಿಂದ ಇತರ ಹಲವು ಸಮುದಾಯಗಳಿಗೆ ಅನ್ಯಾಯವಾಗಲಿದೆ. ಕೋಲಿ, ಮೊಗವೀರ ಸಮುದಾಯಗಳನ್ನು ಸಹ ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂಬ ಬೇಡಿಕೆ ಇದೆ. ಈ ಸಮುದಾಯಗಳಿಗೆ ಸಹ ನ್ಯಾಯ ಕೊಡಬೇಕು ಎಂದು ದೇವೇಗೌಡರು ಆಗ್ರಹಿಸಿದ್ದಾರೆ.