i
ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ರಾಶಿ ರಾಶಿ ಕಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮದೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ ಎಚ್ ಕೆ ಎಸ್ ಸ್ವಾಮಿ ದೂರಿದ್ದಾರೆ.
ಚಿತ್ರದುರ್ಗ ನಗರದ ಮೆದೇಹಳ್ಳಿ ಸರ್ಕಲ್ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ. ಎಲ್ಲೆಂದರಲ್ಲಿ ಕಸ ಬಿಸಾಡುತ್ತಿರುವ ದೃಶ್ಯ ಸಾಮಾನ್ಯವಾಗಿದ್ದು ನೋಡುಗರಿಗೆ ಅಸಹ್ಯ ಹುಟ್ಟಿಸುವಂತಿದೆ. ಯಾರಾದರೂ ಈ ಊರಿಗೆ ನಗರದ ವೀಕ್ಷಣೆಗೆಂದು ಬಂದವರಿಗೆ ಈ ದೃಶ್ಯ ನೋಡಿ ಅಘಾತವಾದರೂ ಆಗಬಹುದು ಎಂದು ಅವರು ಆರೋಪಿಸಿದ್ದಾರೆ.
ಬಿದ್ದಿರ ಕಸವನ್ನ ವಾರಕ್ಕೊಮ್ಮೆಯಾದರೂ ಸ್ವಚ್ಛಗೊಳಿಸಿದರೆ ನೋಡುಗರಿಗೆ ಆನಂದವಾದರೂ ಉಂಟಾಗುತ್ತದೆ. ಈಗ ರಸ್ತೆ ಬದಿಯಲ್ಲಿ ಓಡಾಡುವರೆಲ್ಲ ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲಾಡಳಿತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮದೇಹಳ್ಳಿ ಪಂಚಾಯಿತಿ, ನಗರಾಡಳಿತ ಯಾವುದರ ಕಣ್ಣಿಗೂ ಸಹ ಬೀಳದಷ್ಟು ಕಸ ಸಂಗ್ರಹವಾಗುತ್ತಿದೆ.
ಪ್ಲಾಸ್ಟಿಕ್ ಅನ್ನು ಪ್ರಾಣಿ ಪಕ್ಷಿಗಳು ದಿನನಿತ್ಯ ತಿಂದು ಆರೋಗ್ಯ ಕೆಡಿಸಿಕೊಳ್ಳುತ್ತಿವೆ.
ಶೀಘ್ರವಾಗಿ ನಗರಾಡಳಿತ ಅಥವಾ ರಾಷ್ಟ್ರೀಯ ದಾರಿ ಪ್ರಾಧಿಕಾರದವರು ಈ ರಸ್ತೆಯನ್ನು ಸ್ವಚ್ಛಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.