i
ಮನೆ ನಿರ್ಮಾಣದ ಸಹಾಯಧನ ಹೆಚ್ಚಳ ಮಾಡಿದ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸರ್ಕಾರದ ವತಿಯಿಂದ ಬಡವರು ನಿರ್ಮಾಣ ಮಾಡುವ ಮನೆಗಳಿಗೆ ಸಹಾಯಧನದಲ್ಲಿ ಹೆಚ್ಳಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅವರು ಶಾಸಕರಾದ ಕೆ.ಜೆ. ಬೋಪಯ್ಯ ಅವರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮನೆಗಳ ನಿರ್ಮಾಣಕ್ಕಾಗಿ, ನೀಡುತ್ತಿರುವ ಹಣ ಯಾವುದಕ್ಕೂ ಸಾಲುತ್ತಿಲ್ಲ ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ 3 ಲಕ್ಷ ರೂ. ಹಾಗೂ ನಗರ ಪ್ರದೇಶಗಳಲ್ಲಿ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ ಅಂತ ತಿಳಿಸಿದರು.
ರಾಜ್ಯದಲ್ಲಿ 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ, ಸಹಾಯಧನ ಹೆಚ್ಚಳದಿಂದ 5 ಲಕ್ಷ ಮನೆಗಳನ್ನು 3 ಲಕ್ಷಕ್ಕೆ ಇಳಿಸಲಾಗಿದೆ ಎಂದು ಸೋಮಣ್ಣ ಮಾಹಿತಿ ನೀಡಿದರು.