i
ವಾಣಿವಿಲಾಸ ಸಕ್ಕರೆ ಕಾರ್ಖಾನೆ ಪುನರ್ ಆರಂಭಕ್ಕಾಗಿ ಪೂರ್ವಭಾವಿ ಸಭೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ವಾಣಿ ವಿಲಾಸ ಜಲಾಶಯ ಭರ್ತಿಯಾಗಿದ್ದು ಮತ್ತೆ ವಾಣಿ ಸಕ್ಕರೆ ಕಾರ್ಖಾನೆ ಪುನರ್ ಆರಂಭದ ಕೂಗು ಎದ್ದಿರುವ ಸಂದರ್ಭದಲ್ಲೇ ಹಿರಿಯೂರು ವಿಧಾನಸಭಾ ಕ್ಷೇತ್ರ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಂಬಂಧಿಸಿದ ಸಚಿವರೊಂದಿಗೆ ಬೆಳಗಾವಿಯಲ್ಲಿ ಸಭೆ ನಡೆಸಿ ಚರ್ಚಿಸುವ ಮೂಲಕ ಸಕ್ಕರೆ ಕಾರ್ಖಾನೆ ಪುನರ್ ಆರಂಭದ ಆಸೆ ಚುಗುರತೊಡಗಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಮುನೇನಕಪ್ಪ ರವರ ಅಧ್ಯಕ್ಷತೆಯಲ್ಲಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಹಿರಿಯೂರಿನ ವಾಣಿವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಸಂಬಂಧ ಚರ್ಚಿಸಲಾಯಿತು.
ಈ ಮಹತ್ವದ ಸಭೆಯಲ್ಲಿ ಬೆಂಗಳೂರು ಆಯುಕ್ತರು ಕಬ್ಬು ಅಭಿವೃದ್ಧಿ ನಿರ್ದೇಶಕರು, ಕೇಂದ್ರ ಸ್ಥಾನಿಕ ಸಹಾಯಕರು ಆಯುಕ್ತರು ಕಬ್ಬು ಅಭಿವೃದ್ಧಿ ನಿರ್ದೇಶಕರು, ಹಿರಿಯೂರು ವಾಣಿ ಸಕ್ಕರೆ ಕಾರ್ಖಾನೆಯ ಸಮಾಪನಾಧಿಕಾರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.