i
ಸರ್ಕಾರಿ ಭೂಮಿ ಉಳುಮೆ ಮಾಡುವ ರೈತರಿಗೆ ಪ್ರತ್ಯೇಕ ಸರ್ವೆ ನಂಬರ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸರ್ಕಾರಿ ಜಮೀನು, ಗೋಮಾಳದಲ್ಲಿ ರೈತರು ಉಳುಮೆ ಮಾಡುತ್ತಿದ್ದರೆ ಅಂತಹ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಗೋಮಾಳ, ಜಮೀನುಗಳಲ್ಲಿ ರೈತರು ಹಲವಾರು ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಪಿ ನಂಬರ್ ತೆಗೆದು ಹೊಸ ಸರ್ವೆ ನಂಬರ್ ಕೊಡುವ ಮೂಲಕ ಕೆಲವು ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೀಗಾಗಿ ರಾಜ್ಯಾದ್ಯಂತ ಈ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ತಿಳಿಸಿದರು.
ಗೋಮಾಳ ಅಥವಾ ಸರ್ಕಾರಿ ಜಮೀನಿನ ಪ್ರಮಾಣ ಇರುವುದಕ್ಕಿಂತ ಕಡಿಮೆ ಜಮೀನನ್ನು ರೈತರಿಗೆ ಕೊಟ್ಟಿದ್ದರೆ ಮಾತ್ರ ಪಿ ನಂಬರ್ ಕೊಡುವ ಚಿಂತನೆ ಇದೆ. ಇದಕ್ಕಾಗಿ ಸರ್ವೇ ಕಾರ್ಯ ಕೈಗೊಳ್ಳಲಾಗುವುದು ಹೊಸ ಕಾಯ್ದೆ ಜಾರಿಗೆ ತರಲು ಜನಪ್ರತಿನಿಧಿಗಳ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.