i
ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಹರಿಹರ:
ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ಪೀಕರಿಸುವ ಸಂದರ್ಭದಲ್ಲಿ ಬಿದ್ದಿದ್ದಾರೆ.
ಖಾಸಗಿ ಶಾಲೆಯೊಂದರ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿದ್ದಪ್ಪ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹರಿಹರದ ಕೆ.ಆರ್.ನಗರದ ದುರುಗೋಜಿ ಗೋಪಾಲರಾವ್ ಎಜುಕೇಷನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಿ.ಜಿ.ರಘುನಾಥ್ ಅವರು ತಮ್ಮ ವಿದ್ಯಾದಾಯಿನಿ ಶಾಲೆಯ ಸಿಬಿಎಸ್ಇ ಮಾನ್ಯತೆ ನವೀಕರಣಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನಮೂನೆ 15ರಲ್ಲಿ ಅಗತ್ಯ ಪ್ರಮಾಣಪತ್ರ ಹಾಗೂ ಶಾಲಾ ಶುಲ್ಕ ನಿಗದಿ ಮಾಡಿಕೊಡಲು ಬಿಇಒ ಕಚೇರಿಗೆ ಮನವಿ ಸಲ್ಲಿಸಿ ವಾರಗಟ್ಟಲೆ ಓಡಾಟ ಮಾಡಿದ್ದರು ಎನ್ನಲಾಗಿದೆ.
ಆರೋಪಿ ಬಿಇಒ ಸಿದ್ದಪ್ಪ ಸದರಿ ಕೆಲಸ ಮಾಡಿಕೊಡಲು 50,000 ಲಂಚಕ್ಕೆ ಬೇಡಿಕೆ ಇಟ್ಟು ಮುಂಗಡವಾಗಿ 10 ಸಾವಿರ ರೂ. ಪಡೆದಿದ್ದು ಬಾಕಿ 40 ಸಾವಿರ ರೂ. ನೀಡುವಂತೆ ಮತ್ತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಷ್ಟು ಹಣ ನೀಡಲು ಒಪ್ಪದ ರಘುನಾಥ್ 15 ಸಾವಿರ ರೂ.ಲಂಚ ನೀಡುವಾಗ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ರಾಮಕೃಷ್ಣ ಕೆ.ಜಿ. ಸಿಪಿಐಗಳಾದ ಆಂಜನೇಯ ಎನ್.ಎಚ್. ಹಾಗೂ ಎಚ್.ಎಸ್. ರಾಷ್ಟ್ರಪತಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದಾಳಿಯ ನೇತೃತ್ವ ವಹಿಸಿದ್ದರು.