i
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಒತ್ತಾಯಿಸಿ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಜ.9 ರಂದು ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಮನವಿ ಪತ್ರ ನೀಡಲು ತೀರ್ಮಾನಿಸಲಾಯಿತು.
ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕಾಡುಗೊಲ್ಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ಮುಖಂಡರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದು, ರಾಜ್ಯ ಸರ್ಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಲು ನಿರ್ಧರಿಸಿದರು.
|ಕಾಡುಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ರಾಜ್ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್, ಪ್ರಕಾಶ್ ಬೆನ್ನೂರು, ಶಿವಣ್ಣ ಗಂಜಿಗಟ್ಟೆ, ಕೃಷ್ಣಪ್ಪ ಉಪ್ಪನಾಯಕನಹಳ್ಳಿ, ಸಿದ್ದಣ್ಣ ಜೆ.ಸಿ.ಹಳ್ಳಿ, ಜಗದೀಶ್, ಸಿ.ರೇವಣಸಿದ್ದಪ್ಪ, ರಮೇಶ್ ಭೀಮಸಮುದ್ರ, ತಿಮ್ಮರಾಯಪ್ಪ, ಮುರಳಿ, ಗಂಜಿಗಟ್ಟೆಯ ಮಧುಗೌಡ, ಕೆ.ರಾಜಪ್ಪ, ರಂಗಸ್ವಾಮಿ ಸೇರಿದಂತೆ ಕಾಡುಗೊಲ್ಲ ಜನಾಂಗದ ಅನೇಕರು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.