i
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಕಾರ್ಯದರ್ಶಿಯಾಗಿ ಎಸ್. ಕೆ. ಬಸವರಾಜನ್ ಅವಿರೋಧ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿರುವ ಶ್ರೀ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಎಸ್. ಕೆ. ಬಸವರಾಜನ್ ಅವಿರೋಧ ಆಯ್ಕೆ ಆಗಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದಡಿ ಮುರುಘಾ ಶರಣರು ಕಾರಾಗೃಹದಲ್ಲಿರುವ ಸಂದರ್ಭದಲ್ಲೇ ಎಸ್.ಕೆ.ಬಸವರಾಜನ್ ಅವರ ಆಯ್ಕೆ ಆಗಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಶ್ರೀ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷರಾಗಿದ್ದ ಶಿವಮೂರ್ತಿ ಮುರುಘಾ ಶರಣರನ್ನು ವಜಾಗೊಳಿಸಿ ಈ ಹಿಂದೆ ಕಿತ್ತು ಹಾಕಲಾಗಿತ್ತು. ಸೋಮವಾರ ನಡೆದ ಅನಾಥ ಸೇವಾಶ್ರಮದ ವಿಶ್ವಸ್ತರ ಸಭೆಯಲ್ಲಿ ಕಾರ್ಯದರ್ಶಿಯಾಗಿ ಬಸವರಾಜನ್, ಖಜಾಂಚಿಯಾಗಿ ಜಿ.ಎನ್.ಮಲ್ಲಿಕಾರ್ಜುನಪ್ಪ ಇವರುಗಳನ್ನು ಸರ್ವಾನುಮತದಿಂದ ಅವಿರೋಧ ಆಯ್ಕೆ ಮಾಡಿದ್ದು ಬ್ಯಾಂಕ್ ಮತ್ತು ಇತರೆ ಹಣಕಾಸು ವ್ಯವಹಾರ ಮಾಡಲು ಇದು ಸಹಕಾರಿಯಾಗಲಿದೆ.