i
ಜಿಪಂ ತಾಪಂ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಇದ್ದರೆ ಈಗಲೇ ಸಲ್ಲಿಸಿ..
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಜಿಪಂ, ತಾಪಂ ಸದಸ್ಯರ ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿ ಮಾಡಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ನಿಗದಿಗೊಳಿಸಿದ್ದು, ಸೋಮವಾರ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಕುರಿತು ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ರೊಳಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ.
ಜಿಪಂ, ತಾಪಂ ಗಡಿ ಅಥವಾ ಗ್ರಾಮಗಳ ಸೇರ್ಪಡೆ ಕುರಿತಾಗಿ ಮತದಾರರಲ್ಲಿ ಆಕ್ಷೇಪಣೆಗಳು ಇದ್ದರೆ ಆನ್ ಲೈನ್ ಮೂಲಕ ಅಥವಾ ಖುದ್ದಾಗಿ ಅಥವಾ ಅಂಚೆಯ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗಾಗಿ ಇದೇ ಜಿಪಂ, ತಾಪಂಗಳ ಗಡಿಗಳನ್ನು ಪರಿಶೀಲನೆ ಮಾಡಿಕೊಳ್ಳುವುದು ಅನುಕೂಲ. https//rdpr.karnataka.gov.in/rdc/public/ ನಲ್ಲಿ ಮುಖಪುಟದ ಎಡ ಭಾಗದಲ್ಲಿರುವ ಸಾರ್ವಜನಿಕರ ಸಲಹೆಗಳು ಎಂಬ ಶೀರ್ಷಿಕೆ ಕ್ಲಿಕ್ ಮಾಡಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇಲ್ಲವೇ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, ಮೂರನೇ ಗೇಟ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 222/ಎ ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ, ಬೆಂಗಳೂರು -1 ಈ ವಿಳಾಸಕ್ಕೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಕರಡು ಅಧಿಸೂಚನೆಯ ನಂತರ ಬೆಂಗಳೂರು ನಗರ ಜಿಲ್ಲೆ 28, ಗ್ರಾಮಾಂತರ ಜಿಲ್ಲೆ 25, ಕೋಲಾರ 29, ರಾಮನಗರ 28, ಚಿಕ್ಕಬಳ್ಳಾಪುರ 29, ವಿಜಯನಗರ 28, ಬಳ್ಳಾರಿ 28, ಕೊಪ್ಪಳ 31, ರಾಯಚೂರು 38, ಬೀದರ್ 35, ಯಾದಗಿರಿ 28, ಹಾವೇರಿ 34, ವಿಜಯಪುರ 44, ಭಾಗಲಕೋಟೆ 35, ಉತ್ತರ ಕನ್ನಡ 54, ಕಲಬುರ್ಗಿ 48, ಗದಗ 25, ಧಾರವಾಡ 28, ಬೆಳಗಾವಿ 91, ಉಡುಪಿ 28, ದಕ್ಷಿಣ ಕನ್ನಡ 35, ಕೊಡಗು 25, ಚಾಮರಾಜನಗರ 28, ಚಿಕ್ಕಮಗಳೂರು 36, ಹಾಸನ 39, ಮಂಡ್ಯ 40, ಮೈಸೂರು 46, ಶಿವಮೊಗ್ಗ 31, ಚಿತ್ರದುರ್ಗ 37, ತುಮಕೂರು 57, ರಾಮನಗರ 28, ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಹೆಚ್ಚಳವಾಗಿದೆ.