i
ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪನ ಇಲಾಖೆ ಅಧಿಕಾರಿ…
ಚಂದ್ರವಳ್ಳಿ ನ್ಯೂಸ್, ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಜಮೀನೊಂದರ ಬದಲಿ ನಕ್ಷೆ ತಯಾರಿಸಿಕೊಡಲು ಸರ್ವೆ ಅಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಈಗ ಜೈಲು ಕಂಬಿ ಏಣಿಸುತ್ತಿದ್ದಾರೆ.
ಅಂಕೋಲಾ ತಾಲೂಕು ಭೂ ದಾಖಲೆ ಮತ್ತು ಸರ್ವೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ ಎನ್ನಲಾಗಿದೆ.
ಜಮೀನು ನಕ್ಷೆಗಾಗಿ ರೈತರು ರಮೇಶ ನಾಯಕ ಎಂಬುವವರು ಅರ್ಜಿ ಸಲ್ಲಿಸಿದ್ದು ನಕ್ಷೆ ಬದಲಿಸಿ ಕೊಡಲು 50 ಸಾವಿರ ರೂಪಾಯಿ ನೀಡುವಂತೆ ಅಧಿಕಾರಿ ಪುಟ್ಟಸ್ವಾಮಿ ಬೇಡಿಕೆಯಿಟ್ಟು ಮುಂಗಡವಾಗಿ 5 ಸಾವಿರ ರೂಪಾಯಿ ಪಡೆದುಕೊಂಡಿದ್ದರು. ಈ ಬಗ್ಗೆ ರಮೇಶ ನಾಯಕ ಕಾರವಾರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಡಿ.ವೈ.ಎಸ್.ಪಿ ರಾಜು ನೇತೃತ್ವದ ತಂಡ ಖಾಸಗಿ ಹೊಟೇಲ್ನಲ್ಲಿ ಆರೋಪಿ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಕಾರವಾರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.