i
ಮುರುಘಾ ಶರಣರಿಗೆ ಬಿಟ್ಟು ಬಿಡದಂತೆ ಕಾಡುತ್ತಿರುವ ಸಂಕಷ್ಟಗಳು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಪ್ರಾಪ್ತ ಹಾಸ್ಟೆಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದಡಿ ಕಾರಾಗೃಹದಲ್ಲಿರುವ ಮುರುಘಾ ಶರಣರಿಗೆ ಮತ್ತೊಂದು ಭೂ ಸಂಕಷ್ಟ ಎದುರಾಗಿದೆ. ಮಠದ ಭೂಮಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಮುರುಘಾ ಶರಣರಿಗೆ ಬೆಂಗಳೂರು ಕೋರ್ಟ್ ಬಾಡಿ ವಾರಂಟ್ ಜಾರಿ ಮಾಡಿದೆ.
ಮುರುಘಾ ಶರಣರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಬಾಡಿ ವಾರಂಟ್ ಜಾರಿಗೊಳಿಸಿದ್ದು, ಫೆಬ್ರವರಿ 9ರಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಚಿತ್ರದುರ್ಗದ ಎಸ್ ಪಿ ಕೆ.ಪರಶುರಾಮ್ ಅವರಿಗೆ ಸೂಚಿಸಿದೆ.
ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ 2009ರಲ್ಲಿ ಮುರುಘಾ ಶರಣರ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ಪ್ರಕರಣ ದಾಖಲಿಸಿದ್ದರು. ಮುರುಘಾ ಶರಣರ ವಿರುದ್ಧ ಐಪಿಸಿ ಸೆಕ್ಷನ್ 420, 405, 406, 418 ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ಬಾಡಿ ವಾರಂಟ್ ಹೊರಡಿಸಿದೆ.