i
ದ್ವಿಚಕ್ರ ತ್ರಿಚಕ್ರ ವಾಹನಗಳಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ವತಿಯಿಂದ 2022-23ನೇ ಸಾಲಿಗೆ ದ್ವಿಚಕ್ರ, ತ್ರಿಚಕ್ರ ವಾಹನ ಯೋಜನೆಯಡಿ ಮಾದಿಗ ಮತ್ತು ಸಂಬಂಧಿತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸುವಿಧಾ – / ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಗ್ರಾಮ ಒನ್/ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬುದಾಗಿದೆ ಎಂದು ಜಿಲ್ಲಾ ವ್ಯವ್ಥಾಪಕರು, ಬೆಂಗಳೂರು ನಗರ ಜಿಲ್ಲೆ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.