i
ಇದೊಂದು ಜೆಡಿಎಸ್ ಪಕ್ಷದ ಐತಿಹಾಸಿಕ ಸಭೆ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಹುಮನಾಬಾದ್:
ಹುಮನಾಬಾದ್ ಪಟ್ಟಣದಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಬೃಹತ್ ಸಮಾವೇಶ. ನನ್ನ ಅಭಿಪ್ರಾಯದಲ್ಲಿ ಇದು ಐತಿಹಾಸಿಕ ಸಭೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಹೇಳಿದರು.
ಹುಮನಾಬಾದ್ ನಲ್ಲಿ ನಡೆದ ಪಂಚರತ್ನ ರಥಯಾತ್ರೆ ಹಾಗೂ ಜೆಡಿಎಸ್ ಸಭೆಯಲ್ಲಿ ಅವರು ಮಾತನಾಡಿದರು.
ಹುಮನಾಬಾದ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀ ಫೈಝ್ ಇಬ್ರಾಹಿಂ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಸಂಸದ ಒಬೆದುಲ್ಲಾ ಹಶ್ಮಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಮಾಜಿ ಸದಸ್ಯ ರಮೇಶ್ ಗೌಡ, ಶಿವಕುಮಾರ ನಾಟೆಕಾರ್ ಇತರರು ಹಾಜರಿದ್ದರು.