i
ಚಂದ್ರವಳ್ಳಿ ನ್ಯೂಸ್, ಸುಬ್ರಹ್ಮಣ್ಯ:
ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ ಘಟನೆ ನಡೆದಿದೆ.
ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿ ವಾಪಸ್ ಹೋಗಿದ್ದಾರೆ. ನಂದನ್ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖಿತ ರೂಪದಲ್ಲಿ ಬರೆದು ಕೊಟ್ಟು ನಂದನ್ನೊಂದಿಗೆ ತೆರಳಿದ್ದಾರೆ. ಪೊಲೀಸರು ಅವರ ಇರುವಿಕೆಯನ್ನು ಪತ್ತೆ ಮಾಡಲು ಕಾರ್ಯಾಚರಣೆ ನಡೆಸಿದ್ದರು.