i
ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದಲ್ಲಿ ಕಾರ್ಯಕಾರಿ ಸಮಿತಿ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ರೈತರ ಸಮಸ್ಯೆಗಳ ಕುರಿತು ಪೂರಕ ಇಲಾಖಾ ಮುಖ್ಯಸ್ಥರೊಂದಿಗೆ ಚರ್ಚಿಸಲಾಯಿತು.
ರೇಷ್ಮೆ ಇಲಾಖೆಯ ಜಂಟಿ ನಿರ್ದೇಶಕರಾದ ವಿಜಯಕುಮಾರಿ ಅವರು ರೇಷ್ಮೆ ಹುಳು ಸಾಕುವ ಮನೆ, ರೇಷ್ಮೆ ಹುಳು ಸಾಕಾಣಿಕೆ ತರಬೇತಿ, ಮಳೆ ಆಶ್ರಯದಲ್ಲಿ ಬೆಳೆಯುವ ಹಿಪ್ಪುನೇರಳೆ ಕುರಿತು ಮಾಹಿತಿ ನೀಡಿದರು.
ಪಶುಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣಪ್ಪ ಅವರು ಮಾತನಾಡಿ, ಜಾನುವಾರಗಳ ಆರೋಗ್ಯ ಸಂರಕ್ಷಣೆ, ಖಾಯಿಲೆಗೆ ಸಂಬಂಧಿಸಿದಂತೆ ಸಂರಕ್ಷಣೆ ಲಸಿಕೆ, ಜಾನುವಾರುಗಳ ವಿಮೆ ಕುರಿತಾಗಿ ಅವರು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರಾದ ಜಿ. ಶಿವನಗೌಡರು, ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.