i
ಹಿರಿಯೂರು ಕ್ಷೇತ್ರದ ಮತದಾರರು ಸ್ಥಳೀಯರನ್ನೇ ಆಯ್ಕೆ ಮಾಡುವ ಮೂಲಕ ಕೆಟ್ಟ ಹೆಸರು ಅಳಿಸಲಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಹುಟ್ಟುಹಬ್ಬದ ಅಂಗವಾಗಿ ಹಿರಿಯೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪಕ್ಷದ ಕಾರ್ಯಕರ್ತರು ಆಯೋಜಿಸಿದ್ದರು.
ಹಿರಿಯೂರು ನಗರದ ರಂಜಿತ್ ಹೋಟೆಲ್ ಸಮೀಪ ಬೃಹತ್ ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಿದ ಪಕ್ಷದ ಕಾರ್ಯಕರ್ತರು ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಜನಾರ್ಧನರೆಡ್ಡಿ ಹೆಸರಿನಲ್ಲಿ ಹಣ್ಣು, ಹಾಲು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಬರೀ ಹೊರಗಿನವರೇ ಆಯ್ಕೆಯಾಗುತ್ತಿದ್ದಾರೆ. ಕ್ಷೇತ್ರದ ಮತದಾರರು ದುಡ್ಡಿಗಾಗಿ ಮತ ಮಾರಾಟ ಮಾಡಿಕೊಳ್ಳುತ್ತಾರೆ, ಹಣ ಇದ್ದವರು ಹಣ ಚೆಲ್ಲ ಬಂಡವಾಳ ಮಾಡಿಕೊಳ್ಳುತ್ತಿದ್ದು ಈ ಪರಿಪಾಠ ಸ್ಥಗಿತವಾಗಬೇಕು. ಸ್ಥಳೀಯರು ಪಕ್ಷ ಭೇದ ಮರೆತು ಸ್ಥಳೀಯ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿರು ಕೆಟ್ಟ ಹೆಸರು ಅಳಸಿ ಹಾಕಬೇಕು ಎಂದು ಒತ್ತಾಯಿಸಿದರು.
2023ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಹೊರಗಿನವರಿಗೆ ಟಿಕೆಟ್ ನೀಡಿದರೆ ಅಂತಹ ಅಭ್ಯರ್ಥಿಗಳನ್ನು ಸೋಲಿಸಿ ಮನೆಗೆ ಕಳಿಸಬೇಕು ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು. ಜನಾರ್ಧನ ರೆಡ್ಡಿ ಅಭಿಮಾನಿಗಳು, ಕೆಆರ್ಪಿ ಪಕ್ಷದ ಕಾರ್ಯಕರ್ತರು ಇದ್ದರು.