i
ತಲೆ ಮರೆಸಿಕೊಂಡಿದ್ದ ಗ್ರಾಪಂ ಪಿಡಿಒ ನಾಗರಾಜ್ ಬಂಧನ…
ಚಂದ್ರವಳ್ಳಿ ನ್ಯೂಸ್, ಜಗಳೂರು:
ಆರ್ಟಿಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣನ ಪ್ರಮುಖ ಕೊಲೆ ಆರೋಪಿ ಗ್ರಾಪಂ ಪಿಡಿಒ ಕೊನೆಗೂ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.
ಆರ್ಟಿಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣನನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ದಾಬಾ ಬಳಿ ಕೊಲೆ ಮಾಡಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ಪಿಡಿಒ ಎ.ಟಿ.ನಾಗರಾಜ್ ತಲೆಮರೆಸಿಕೊಂಡಿದ್ದು ಇದೀಗ ದಾವಣಗೆರೆ 2ನೇ ಹೆಚ್ಚುವರಿ ಜಿಲ್ಲಾ ಕೋರ್ಟ್ನಲ್ಲಿ ಶರಣಾಗಿದ್ದಾನೆ. ನ್ಯಾಯಾಲಯ ಆರೋಪಿ ನಾಗರಾಜನನ್ನ ಪೊಲೀಸರ ವಶಕ್ಕೆ ನೀಡಿದೆ.
ಜಗಳೂರು ಸಮೀಪದ ಹೊಸಕೆರೆ ಬಳಿಯ ಡಾಬಾದಲ್ಲಿ ಜ.7ರಂದು ಗೌರಿಪುರ ಗ್ರಾಮದ ನಿವಾಸಿ ರಾಮಕೃಷ್ಣ(30) ಎಂಬಾತನನ್ನು ಹಳೇ ದ್ವೇಷದ ಹಿನ್ನೆಲೆ ಗ್ಯಾಂಗ್ಯೊಂದು ಕಬ್ಬಿಣದ ರಾಡ್ನಿಂದ ಹೊಡೆದು ಕಲ್ಲು ಎತ್ತಿಹಾಕಿ ಕೊಲೆ ಮಾಡಿತ್ತು. ಕೊಲೆ ಆರೋಪಿಗಳಲ್ಲಿ ಓರ್ವ ವ್ಯಕ್ತ ಪಿಡಿಓ ಸಂಬಂಧಿಯಾಗಿದ್ದನು. ಇದೇ ಕಾರಣಕ್ಕೆ ಪಿಡಿಓ ಎ.ಟಿ.ನಾಗರಾಜ್ನೇ ಕೊಲೆ ಮಾಡಿಸಿದ್ದಾನೆ ಎಂದು ವ್ಯಕ್ತಿಯ ಸಂಬಂಧಿಕರು ಆರೋಪಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಅರ್ಜುನ್ ಹಾಗೂ ಪ್ರಶಾಂತ ಎಂಬ ಇಬ್ಬರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದರು. ಪ್ರಮುಖ ಆರೋಪಿ ಪಿಡಿಒ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.