i
ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ತಿಪಟೂರು ಕ್ಷೇತ್ರದಿಂದ ಸ್ಪರ್ಧೆ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ವೇದಿಕೆಯಲ್ಲೇ ಘೋಷಣೆ ಮಾಡುವ ಮೂಲಕ ಇಡೀ ತುಮಕೂರು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದಾರೆ.
ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲವಿತ್ತು, ಶ್ರೀ ಗುರು ಸಿದ್ದರಾಮೇಶ್ವರ ಜಯಂತೋತ್ಸವ ಸಮಾರೋಪ ಸಮಾರಂಭದ ವೇದಿಕೆಯಲ್ಲೇ ವಿಜಯೇಂದ್ರ ಉತ್ತರ ನೀಡುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿ ಚಪ್ಪಾಳೆಯೊಂದಿಗೆ ಅಬ್ಬರಿಸಿದ್ದಾರೆ.
ವಿಜಯೇಂದ್ರ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವಿಜಯೇಂದ್ರ ಅವರೇ ತಿಪಟೂರಿನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.