i
ಮರು ಪರೀಕ್ಷೆ ನಡೆಸಬಾರದೆಂದು ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿ.ಎನ್.ಎಂ. ನರ್ಸಿಂಗ್ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬಾರದೆಂದು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸುಡು ಬಿಸಿಲಿನಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಗೇಟ್ನಲ್ಲಿ ಕುಳಿತು ಯಾರು ಒಳ ಹೋಗಲು ಹೊರ ಬರಲು ಅವಕಾಶ ನೀಡದ ನರ್ಸಿಂಗ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಯೆ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು.
ಜಿಲ್ಲಾಧಿಕಾರಿ ವಿ.ಸಿ.ಯಲ್ಲಿದ್ದ ಕಾರಣ ಬರುವುದು ತಡವಾಗುತ್ತದೆನ್ನುವುದನ್ನು ಅರಿತ ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಧ್ಯಾಹ್ನ 2.30 ಗಂಟೆಯವರೆಗೆ ಸ್ಥಳ ಬಿಟ್ಟು ಕದಲದೆ ಕಾದಿದ್ದು, ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿ ಮರು ಪರೀಕ್ಷೆ ನಡೆಸದಂತೆ ಕೋರಿದರು.