i
ರಾಜಕೀಯ ನಾಯಕರೋ OR ತಹಶೀಲ್ದಾರೋ, ರಘುಮೂರ್ತಿ ವಿರುದ್ಧ ದೂರು ನೀಡಿದ ಕಾಂಗ್ರೆಸ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ತಹಶೀಲ್ದಾರೋ ಅಥವಾ ರಾಜಕೀಯ ನಾಯಕರೋ ತಿಳಿಯುತ್ತಿಲ್ಲ, ರಘುಮೂರ್ತಿ ಚಳ್ಳಕೆರೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿಗೆ ಬುಧವಾರ ದೂರು ಸಲ್ಲಿಸಿ ಶಿಸ್ತು ಕ್ರಮಕ್ಕೆ ಒತ್ತಾಯಿಸಲಾಯಿತು.
ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಸರ್ಕಾರಿ ಅಧಿಕಾರಿ ಎನ್ನುವುದನ್ನು ಮರೆತು ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಫ್ಲೆಕ್ಸ್ಗಳಲ್ಲಿ ಫೋಟೋಗಳನ್ನು ಹಾಕಿಸಿಕೊಂಡಿರುವುದು ಹಾಗೂ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಜೆರಾಕ್ಸ್ ಸೇರಿದಂತೆ ಅನೇಕ ದಾಖಲೆಗಳನ್ನು ಉಪವಿಭಾಗಾಧಿಕಾರಿಗೆ ನೀಡಿ ಕಾನೂನು ಅಡಿ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರುಗಳು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ಕುಮಾರ್, ಡಿ.ಎನ್.ಮೈಲಾರಪ್ಪ,ನಾಗರಾಜ್ಜಾನ್ಹವಿ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಅಂಜಿನಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಆರ್.ಶೇಷಣ್ಣಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಯುವ ಮುಖಂಡರಾದ ಸೈಯದ್ ಖುದ್ದೂಸ್, ಬಾಬು, ಅಶೋಕ್ನಾಯ್ಡು, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.