i
ವಸತಿ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಿಕೆ-ಪೂರ್ಣಿಮಾಶ್ರೀನಿವಾಸ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು, ಸಾಮಾನ್ಯವರ್ಗಗಳ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದ್ದು, ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ತಾಲ್ಲೂಕಿನ ಜನರ ಬೇಡಿಗೆಗಳಿಗೆ ಸ್ಪಂದಿಸಿ ಹೆಚ್ಚು ಜನರಿಗೆ ವಸತಿ ಕಲ್ಪಿಸಲು ಅನುದಾನ ನೀಡಿದ್ದಾರೆ ಎಂದು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ರಂಗನಾಥಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಎಸ್ ಸಿ, ಎಸ್ ಟಿ, ಅಲ್ಪಸಂಖ್ಯಾತರ, ಸಾಮಾನ್ಯ ವಸತಿ ಯೋಜನೆಯಡಿ ಶಾಸಕರ ಕೋಟಾದಲ್ಲಿ ಹೆಚ್ಚುವರಿ ಮನೆಗಳ ಆಯ್ಕೆಗಾಗಿ ನಡೆದ ಗ್ರಾಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳ ಎಸ್ ಕೆ ಗೌಡ, ಉಪಾಧ್ಯಕ್ಷ ಮಂಜುನಾಥ, ಸದಸ್ಯರಾದ ಜಗದೀಶ್, ಕೃಷ್ಣ ಜೆಕೆ, ಮಂಜೇಶ್ ಬಾಬು, ನಾಗರಾಜ್, ಲಕ್ಷ್ಮಿದೇವಿ, ಪದ್ಮ, ರತಿಕಲಾ, ಮಹದೇವಮ್ಮ, ತಿಪ್ಪೇಸ್ವಾಮಿ, ಮುಖಂಡರಾದ ಶಿವಕುಮಾರ್, ರಾಮಸ್ವಾಮಿ, ಸ್ವಾಮಿನಾಥನ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.