i
ರೈತ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ ಮುಂದುವರಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ವತಿಯಿಂದ ಮಾಸಿಕ ಸಭೆಯನ್ನು ಕರೆಯಲಾಗಿದ್ದು. ಈ ಸಭೆಗೆ ರಾಜ್ಯ ಕಾರ್ಯಾಧ್ಯಕ್ಷ ಸಿದ್ದ ವೀರಪ್ಪ ಭಾಗವಹಿಸಿದ್ದರು. ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಎಸ್ ಹಳ್ಳಿ ಮಲ್ಲಿಕಾರ್ಜುನ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲು ತೀರ್ಮಾನಿಸಲಾಯಿತು.
ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾಗಿ ಮಂಜುನಾಥ್ ಮುದ್ದಾಪುರ, ಕಾರ್ಯದರ್ಶಿಯಾಗಿ ಮಾರುತಿ ಅವರನ್ನು ಆಯ್ಕೆ ಮಾಡಲಾಯಿತು. ರೈತರ ಪಂಪ್ಸೆಟ್ಟುಗಳಿಗೆ ಹಗಲು ಹೊತ್ತು ಎಂಟು ಗಂಟೆ ವಿದ್ಯುತ್ ಕೊಡಬೇಕು. ಅಕ್ರಮ ಸಕ್ರಮದಡಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು. ಭದ್ರಾ ಮೇಲ್ದಂಡೆ ಭೂಮಿ ಕಳೆದುಕೊಂಡ ರೈತರ ಖಾತೆಗೆ ಹಣ ಸಂದಾಯ ಮಾಡಬೇಕು. ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ತತ್ಕಾಲ್ ಪೋಡಿ ಸ್ಕೆಚ್ ಹದ್ದು ಬಸ್ತ್ 50,000 ಆದ ನಂತರ ಶುಲ್ಕವನ್ನು ಕಟ್ಟಿಸಿಕೊಳ್ಳದ ಬಗ್ಗೆ ಮತ್ತು ಆರ್ ಟಿ ಸಿ ಪಹಣಿ ಬೆಲೆ ಜಾಸ್ತಿ ಮಾಡಿರುವ ಬಗ್ಗೆ. ಸಬ್ ರಿಜಿಸ್ಟರ್ ಆಫೀಸಿನಲ್ಲಿ ಹಗಲು ದರೋಡೆಯಾಗುತ್ತಿರುವ ಬಗ್ಗೆ. ರಾಗಿ ಖರೀದಿ ಕೇಂದ್ರ ತೆರೆಯುವ ಬಗ್ಗೆ. ಇನ್ನು ಮುಂತಾದ ವಿಷಯಗಳ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಇದೆ 30 ರಂದು ರಂದು ಪ್ರತಿಭಟನೆ ಮಾಡಲು ತೀರ್ಮಾನಿಸಲಾಯಿತು. ಮತ್ತು ಕೃಷಿ ಮೂರೂ ಕಾನೂನುಗಳನ್ನು ಹಿಂದೆ ಪಡೆಯಬೇಕೆಂದು ಒತ್ತಾಯಿಸಿ ಫೆಬ್ರವರಿ 21ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧವಾಗಬೇಕೆಂದು ತೀರ್ಮಾನಿಸಲಾಯಿತು ಮತ್ತು ವಸ್ತು ವಿನಿಮಯ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕೆಂದು ತೀರ್ಮಾನಿಸಲಾಯಿತು.