i
ಬೆಳೆ ಹಾನಿಗೆ ಲಕ್ಷ ರೂ. ಪರಿಹಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50,000 ರೂ.ನಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಿಂದಾಗಿ ರೈತರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಕಾಡು ಪ್ರಾಣಿಗಳಿಂದ ಉಂಟಾಗುವ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಈಡೇರಿದೆ.
ತೆಂಗು, ಮಾವು, ಭತ್ತ, ರಾಗಿ, ಅಡಿಕೆ, ಟೊಮೆಟೊ ಸೇರಿದಂತೆ 64 ಬೆಳೆಗಳ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರದಿಂದ ಒಂದು ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ಪ್ರಕೃತಿ ವಿಕೋಪ, ಅತಿವೃಷ್ಠಿ, ಅನಾವೃಷ್ಠಿ ಮತ್ತಿತರ ಕಾರಣಗಳಿಂದ ರೈತರು ಕಳೆದುಕೊಳ್ಳುವ ಬೆಳೆ ಹಾನಿಗೂ ಅಷ್ಟೇ ಪರಿಹಾರ ನೀಡುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.