i
ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ 1.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೆಂಗೇರಿ ಬೆಂಗಳೂರು ಗ್ರಾಮಾಂತರ ವೃತ್ತ ಕಚೇರಿಯಲ್ಲೇ ಅಧೀಕ್ಷಕ ಇಂಜಿನಿಯರ್ ಕೃಷ್ಣಪ್ರಸಾದ್ ಲಾಕ್ ಆಗಿದ್ದು, 1.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿ ಎಚ್ ವಿ ಕೃಷ್ಣಪ್ರಸಾದ್ ಅವರನ್ನು ಲೋಕಾಯುಕ್ತ ಡಿವೈಎಸ್ಪಿ ಅಂಥೋನಿ ನೇತೃತ್ವಲ್ಲಿ ಬಂಧಿಸಲಾಗಿದೆ.