i
ಜೆಡಿಎಸ್ ಗೆ ಶಾಕ್ ನೀಡಿದ ಡಿಕೆಶಿ, ನಗರಸಭೆ ಅಧ್ಯಕ್ಷ ಸೇರಿ 11 ಮಂದಿ ಕಾಂಗ್ರೆಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದು ಇಡೀ ನಗರಸಭೆಯನ್ನೇ ಹೈಜಾಕ್ ಮಾಡಿದ್ದಾರೆ.
ನೆಲಮಂಗಲ ನಗರಸಭೆಯ ಜೆಡಿಎಸ್ ಎಲ್ಲ ಸದಸ್ಯರು ಪಕ್ಷ ತೊರೆದು ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎನ್. ಶ್ರೀನಿವಾಸ್ ಇವರ ನೇತೃತ್ವದಲ್ಲಿ ನೆಲಮಂಗಲ ನಗರಸಭೆಯ ಜೆಡಿಎಸ್ ಹಾಲಿ ಅಧ್ಯಕ್ಷೆ ಲತಾ ಹೇಮಂತಕುಮಾರ್ ಹಾಗೂ 10 ಜನ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮರ್ಮಾಘಾತ ನೀಡಿದ್ದಾರೆ.
ನೆಲಮಂಗಲ ನಗರಸಭೆಯಲ್ಲಿ ಒಟ್ಟು 14 ಜನ ಜೆಡಿಎಸ್ ಸದಸ್ಯರಿದ್ದು ಅವರಲ್ಲಿ ಇದೀಗ ಅಧ್ಯಕ್ಷರು ಸೇರಿದಂತೆ 11 ಜನ ಸಾಮೂಹಿಕವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಮೂಲಕ ಪಕ್ಷಾಂತರ ಪರ್ವ ಮುಂದುವರೆಸಿದ್ದಾರೆ.