i
ಅವಕಾಶ ವಂಚಿತ ಯುವಕ-ಯುವತಿಯರಿಗೆ ಉದ್ಯೋಗ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅವಕಾಶ ವಂಚಿತ ಯುವಕ-ಯುವತಿಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 40ಕ್ಕೂ ಹೆಚ್ಚು ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದು, ಸುಮಾರು 2೦೦ ಕ್ಕೂ ಹೆಚ್ಚು ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ನೆಹರು ಮೈದಾನದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಹಾಗೂ ಕೆಪಿಸಿಸಿ ಕಾರ್ಮಿಕ ವಿಭಾಗ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉದ್ಯೋಗ ಮೇಳ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರದ ನೇತೃತ್ವವನ್ನು ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಪ್ರತಿಭಾವಂತ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗಮೇಳ ಹಮ್ಮಿಕೊಂಡಿದ್ದು, ಜೊತೆಗೆ ಸಾರ್ವಜನಿಕರ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಕನ್ನಡಕಗಳ ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂಬುದಾಗಿ ಹೇಳಿದರು.
ತಾಲ್ಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ, ಕಣ್ಣಿನ ಚಿಕಿತ್ಸೆ, ಬಿ.ಪಿ. ಶುಗರ್, ಜನರಲ್ ಮೆಡಿಸನ್, ನರ ರೋಗ ತಜ್ಞರು, ಬೆಂಗಳೂರಿನ ಹೆಸರಾಂತ ಆಸ್ಪತ್ರೆಯ ವೈದ್ಯಾಧಿಕಾರಿಗಳು ನರ ರೋಗ ತಜ್ಞರು, ತಾಲ್ಲೂಕಿನ ಜನರ ಅನುಕೂಲಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ,
ಸುಮಾರು ೪೦೦ಕ್ಕೂ ಹೆಚ್ಚು ಕಣ್ಣಿನ ತಪಾಸಣೆಗೆ ಒಳಪಟ್ಟ ಕಣ್ಣಿನ ಸಮಸ್ಯೆ ಇರುವವರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗಿದೆ. ನೂರಾರು ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಗಿದೆ, ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಮಾತನಾಡಿ, ಮಾಜಿ ಸಚಿವ ಡಿ.ಸುಧಾಕರ್ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಿದರೂ ಅತ್ಯಂತ ಯಶಸ್ವಿಯಾಗಿ ಆಯೋಜನೆ ಮಾಡುತ್ತಾರೆ. ಅದಕ್ಕೆ ಇಲ್ಲಿ ನೆರೆದಿರುವ ಅಸಂಖ್ಯಾತ ಜನರೇ ಸಾಕ್ಷಿ, ತಾಲ್ಲೂಕಿನಿಂದ ಕಷ್ಟದಲ್ಲಿರುವ ಜನರಿಗೂ ಆರ್ಥಿಕ ನೆರವು ನೀಡುವಂತಹ ಏಕೈಕ ವ್ಯಕ್ತಿ ಡಿ.ಸುಧಾಕರ್ ರವರನ್ನು ಮುಂದಿನ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದರು.
ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಮಾತನಾಡಿ, ಡಿ.ಸುಧಾಕರ್ ರವರು ವಿದ್ಯಾವಂತ ನಿರುದ್ಯೋಗಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ಸುಮಾರು ೪೦ಕ್ಕೂ ಹೆಚ್ಚಿನ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳು ಆಗಮಿಸಿ ಉದ್ಯೋಗ ಮೇಳದಲ್ಲಿ ಪ್ರತಿಭಾವಂತ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡುತ್ತಿರುವುದು ಸಂತೋಷದ ವಿಚಾರ, ಅದೇ ರೀತಿ ಹಲವಾರು ಖಾಯಿಲೆಗಳಿಗೆ ನುರಿತ ವೈದ್ಯರನ್ನು ಕರಿಸಿ ಆರೋಗ್ಯ ತಪಾಸಣೆ ಮಾಡಿರುವುದು ಸುಧಾಕರ್ ತಾಲ್ಲೂಕಿನಲ್ಲಿ ಇಟ್ಟಿರುವ ವಿಶ್ವಾಸ ತೋರಿಸುತ್ತದೆ. ಭ್ರಷ್ಟ ಶೇ.4೦ ಬಿ.ಜೆ.ಪಿ ಸರ್ಕಾರ ತೊಲಗುವುದು ಶತಸಿದ್ದ ಎಂದರು.
ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮಹಮ್ಮದ್ ಅಜಾರ್, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಮಹಮ್ಮದ ಮೊಹೀದ್ದೀನ್ ಛೋಟು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಈರಲಿಂಗೇಗೌಡ, ರಾಜ್ಯ ಕಾರ್ಮಿಕ ಘಟಕದ ಉಪಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷ ವಿ.ಶಿವಕುಮಾರ್, ನಗರಸಭಾ ಅಧ್ಯಕ್ಷ ಗೀತಾ ಗಂಗಾಧರ್, ಉಪಾಧ್ಯಕ್ಷ ಗುಂಡೇಶ್ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ರಾಜ್ಯ ಕಾರ್ಮಿಕ ಘಟಕದ ಉಪಾಧ್ಯಕ್ಷ ಡಾ.ಸುಜಾತ, ಜಿಲ್ಲಾ ಕಾರ್ಯಾಧ್ಯಕ್ಷೆ ಜ್ಯೋತಿ ಲಕ್ಷ್ಮಿ, ಗೋಪಿಯಾದವ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುರೇಖಾ ಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನಮ್ಮ, ಮಾಜಿ ತಾ.ಪಂ.ಅಧ್ಯಕ್ಷ ಚಂದ್ರಪ್ಪ, ಮಾಜಿ ತಾ.ಪಂ.ಸದಸ್ಯ ಫಕೃದ್ದೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಗುರುಪ್ರಸಾದ್, ಮಾಜಿ ನಗರಸಭಾ ಅಧ್ಯಕ್ಷ ಈ.ಮಂಜುನಾಥ್, ಬಿ.ಎನ್.ಪ್ರಕಾಶ್, ಶಿವರಂಜಿನಿ, ನಗರಸಭಾ ಸದಸ್ಯ ಜಿ.ಎಸ್.ತಿಪ್ಪೇಸ್ವಾಮಿ, ಸಮೀವುಲ್ಲಾ, ಜಬೀವುಲ್ಲಾ, ರತ್ನಮ್ಮ ಕವಿತ ಲೋಕೇಶ್, ಮೊದಲಮರಿಯಾ, ವಿಶಾಲಾಕ್ಷಮ್ಮ, ಚಿತ್ರಜಿತ್ ಯಾದವ್, ರಾಜ್ಯ ಅಲ್ಪಸಂಖ್ಯಾತ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ರಜೀಯಾ ಸುಲ್ತಾನ್ ಎಸ್.ಸಿ.ಘಟಕದ ಅಧ್ಯಕ್ಷರುಗಳಾದ ಚಂದ್ರನಾಯ್ಕ, ಜಿ.ಎಲ್.ಮೂರ್ತಿ, ಪದವಿಧರ ಅಧ್ಯಕ್ಷ ಕೋಳಿ ಮಂಜುನಾಥ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಜ್ಞಾನೇಶ್, ಗ್ರಾಮ ಪಂಚಾಯಿತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ತಿಮ್ಮರಾಯಪ್ಪ, ಜೀವೇಶ್, ವೆಂಕಟೇಶ್, ಅರುಣ್ ಕುಮಾರ್, ಹಿಂದುಳಿದ ವರ್ಗದ ಅಧ್ಯಕ್ಷ ಗಂಗಾಧರ್, ವಕೀಲರ ಸಂಘದ ಅಧ್ಯಕ್ಷ ದೊಡ್ಡಘಟ್ಟ ಶಿವಕುಮಾರ್, ಕೃಷ್ಣಪೂಜಾರಿ, ಮಾಜಿ ನಗರಸಭಾ ಸದಸ್ಯರಾದ ಪುರುಷೋತ್ತಮ, ವಾರ್ಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪಂಚಾಯಿತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.