i
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಜೆಡಿಎಸ್ ನಾಯಕ ರೈತರ ಕಣ್ಮಣಿ ಹೆಚ್.ಡಿ ಕುಮಾರಸ್ವಾಮಿ ಅವರು 2023ರಲ್ಲಿ ಮುಖ್ಯಮಂತ್ರಿ ಆಗದಿದ್ದರೆ ನಾನು ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸವಾಲ್ ಹಾಕಿದರು.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ಅವರು, ನನ್ನ ರಾಜಕೀಯ ಅನುಭವದ ಆಧಾರದಲ್ಲಿ ಹೇಳುತ್ತಿದ್ದೇನೆ, ಇದು ಉತ್ಪ್ರೇಕ್ಷೆಯಲ್ಲ ಹೆಚ್ ಡಿ ಕುಮಾರಸ್ವಾಮಿ ಸಿಎಂ ಆಗುವುದು ನಿಶ್ಚಿತ, ಸಿಎಂ ಆಗದಿದ್ದರೆ ನಾನು ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುವೆ ಎಂದು ಸಿಎಂ ಇಬ್ರಾಹಿಂ ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಂತೆ ಜೆಡಿಎಸ್ ನಾಯಕರ್ಯಾರು ಜೈಲಿಗೆ ಹೋಗಿಲ್ಲ. ಆ ಎರಡು ರಾಷ್ಟ್ರೀಯ ಪಕ್ಷಗಳು ಒಂದೇ ಮರದ ಎರಡು ಹಕ್ಕಿಗಳು, ಆ ಪಕ್ಷಗಳ ನಾಯಕರಂತೆ ಜೆಡಿಎಸ್ ನಾಯಕರು ಬೇಲ್ ಪಡೆದು ಹೊರ ಬಂದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರು ಎಸಿ ಬಸ್ ನಲ್ಲಿ ತಿರುಗಾಟ ಮಾಡಿದರೆ ಬಿಜೆಪಿ ನಾಯಕರು ಹೆಲಿಕಾಪ್ಟರ್ ನಲ್ಲಿ ಸಂಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಿಜೆಪಿಯವರಿಗೆ ಬರೀ ಸಿಡಿ ಮಾತ್ರ ಬೇಕಿದೆ ಎಂದು ಕಿಡಿಕಾರಿದರು.