i
ಮಾದಿಗ ಸಮುದಾಯದ ಮಕ್ಕಳು ಶಿಕ್ಷಣ, ಉದ್ಯೋಗದಿಂದ ವಂಚಿತ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಮಾದಿಗ ಸಮುದಾಯದ ಮಕ್ಕಳು ಶಿಕ್ಷಣದಿಂದ ವಿಮುಖರಾಗಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಆತಂಕ ವ್ಯಕ್ತ ಪಡಿಸಿದರು.
ತುಮಕೂರು ನಗರದಲ್ಲಿ ಸ್ವಾಭಿಮಾನಿ ಮಾದಿಗ ಮಹಾಸಭಾದ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಅವರು ಮಾತನಾಡಿ, ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲಾಗಿದೆ, ಆದರೂ ಸಹ ಸಮುದಾಯದ ಮಕ್ಕಳು ಏಕೆ ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ ಎನ್ನುವ ಬಗ್ಗೆ ಸಮಾಜದ ಹಿರಿಯರು ಗಂಭೀರ ಚಿಂತನೆ ಮಾಡಬೇಕಿದೆ. ಸಮಾಜದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಸಾಗಬೇಕು. ನಮ್ಮ ಸಮಾಜದವರು ಜಾತಿ ಹೆಸರು ಹೇಳುವುದಕ್ಕೂ ಹಿಂಜರಿಯುತ್ತಾರೆ ಎಂದು ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮಾದಿಗ ಸಮುದಾಯವು ಸಾಮಾಜಿಕ ಪರಿಸ್ಥಿತಿಗಳಿಂದ ಶಿಕ್ಷಣ, ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಮಾದಿಗ ಸಮಾಜ ದೊಡ್ಡ ಸಂಖ್ಯೆಯಲ್ಲಿದ್ದರೂ ಒಗ್ಗಟ್ಟಿನ ಕೊರತೆ ಇದೆ. ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದರೂ ಸಮಾಜದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸದಸ್ಯತ್ವ ಪಡೆಯಬೇಕು ಎಂದರು.
ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಸ್ವಾಭಿಮಾನಿ ಮಾದಿಗ ಮಹಾಸಭಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಗದೀಶ್, ಮುಖಂಡರಾದ ಬಿ.ಎನ್.ಚಂದ್ರಪ್ಪ, ಗಂಗಹನುಮಯ್ಯ, ತಿಮ್ಮರಾಯಪ್ಪ, ಬಿ.ಎಚ್.ಅನಿಲ್ಕುಮಾರ್, ವೈ.ಎಚ್.ಹುಚ್ಚಯ್ಯ, ಕೆಂಚಮಾರಯ್ಯ, ರೂಪಾಶೆಟ್ಟಾಳಯ್ಯ, ಮರಿಚೆನ್ನಮ್ಮ, ಅರುಂಧತಿ, ಲಕ್ಷ್ಮಿಕಾಂತ್, ಮುರುಳೀಧರ್, ವೈ.ಕೆ.ಬಾಲಕೃಷ್ಣಪ್ಪ, ಚಂದ್ರಕುಮಾರ್, ಶಿವನಂಜಪ್ಪ, ಚಿಕ್ಕರಂಗಯ್ಯ, ವಾಲೆ ಚಂದ್ರಯ್ಯ, ನರಸಿಂಹಮೂರ್ತಿ, ಮತ್ತಿತರರಿದ್ದರು.