i
ಇಬ್ಬರು ಸರಗಳ್ಳ ಸುಲಿಗೆಕೋರರ ಬಂಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೊಸದುರ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಇಬ್ಬರು ಅಂತರ್ ರಾಜ್ಯ ಸುಲಿಗೆಕೋರರನ್ನು ಬಂಧಿಸಿದ್ದಾರೆ.
ಶಿರಾ ಮೂಲದ ಸುರೇಶ್(32), ಶ್ರೀನಿವಾಸ್(21) ಬಂಧಿತ ಆರೋಪಿಗಳಾಗಿದ್ದಾರೆ.
ಇತ್ತೀಚೆಗೆ ಹೊಸದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಕಳ್ಳರನ್ನು ಕೊನೆಗೂ ಪೊಲೀಸರು ಬಂಧಿಸಿ ಬಂಧಿತ ಆರೋಪಿಗಳಿಂದ 3 ಲಕ್ಷದ 14 ಸಾವಿರ ಮೌಲ್ಯದ ಚಿನ್ನಾಭರಣ ವಶ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಎಸ್ಪಿ ಕೆ. ಪರಶುರಾಮ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.