i
ಸಿದ್ದರಾಮಯ್ಯಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ 5 ಸೀಟ್ ಗೆದ್ದು ತೋರಿಸಲು ಸವಾಲ್…
ಚಂದ್ರವಳ್ಳಿ ನ್ಯೂಸ್, ರಾಯಚೂರು:
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ ಕನಿಷ್ಠ 5 ಸೀಟ್ ಗೆದ್ದು ತೋರಿಸಲಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಜೆಡಿಎಸ್ ನಿಂದ ಬೆಳೆದು ಹೋದವರು. ನಾವೆಲ್ಲಾ ಇದ್ದಾಗ 50 ಸೀಟ್ ಗೆದ್ದಿದ್ದು ಅಂತಿದ್ದಾರೆ. ನೀವೆಲ್ಲಾ ಬಿಟ್ಟು ಹೋದ ಮೇಲೆ 40 ಸೀಟ್ ಏಕಾಂಗಿಯಾಗಿ ಗೆದ್ದಿದೀನಿ. ಅವರಷ್ಟೇ ಅಲ್ಲ, ನಮ್ಮ ಪರಿಶ್ರಮವಿದೆ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷ ನೆಲ ಕಚ್ಚಲಿದೆ. 40 ಸೀಟ್ ಗೆಲ್ಲುವುದೂ ಕಷ್ಟಕರ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.
ಸಿದ್ದರಾಮಯ್ಯ ಇಷ್ಟೆಲ್ಲ ಮಾತನಾಡುವ ಬದಲು ತಾಕತ್ತಿದ್ದರೆ ಕಾಂಗ್ರೆಸ್ ಬಿಟ್ಟು ಸ್ವಂತ ಪಕ್ಷ ಕಟ್ಟಿ ಕೇವಲ 5 ಸೀಟು ಗೆದ್ದುಕೊಂಡು ಬರಲಿ ಎಂದು ಸವಾಲ್ ಹಾಕಿದರು.
ಕಾಂಗ್ರೆಸ್ ಮುಗಿದುಹೋಗಿದೆ. ಬಿಜೆಪಿಗೆ ಇಲ್ಲಿ ಪರ್ಯಾಯ ಪಕ್ಷವಿಲ್ಲ. ಬೆಳೆಯಲು ಭಗವಂತ ನಮಗೆ ಶಕ್ತಿ ಕೊಟ್ಟಿದ್ದಾನೆ. ಜನರ ಬದುಕನ್ನು ಸರಿಪಡಿಸುವ ಶಕ್ತಿ ನನ್ನಲ್ಲಿದೆ. ಕರ್ನಾಟಕದ ಈ ಚುನಾವಣೆ ಬಳಿಕ ಜೆಡಿಎಸ್ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬೆಳಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.