i
ರೈತ ಮುಖಂಡ ರಂಗಸ್ವಾಮಿ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರೈತ ಮುಖಂಡ, ಪ್ರಗತಿಪರ ರೈತ ಅರಳಿಕೆರೆ ಎ.ವಿ.ರಂಗಸ್ವಾಮಿ(73) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಸಾಕಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಧರ್ಮಪುರ ಸಮೀಪದ ಅರಳಿಕೆರೆಯ ಅವರ ತೋಟದಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮಾಜಿ ಸಚಿವ ಕೆ.ಎಚ್.ರಂಗನಾಥ್ ಅವರ ಒಡನಾಡಿಯಾಗಿದ್ದ ರಂಗಸ್ವಾಮಿ ಅವರು ಹಲವು ಹೊಸ ಹೊಸ ಪ್ರಯೋಗಗಳ ಮೂಲಕ ಪ್ರಗತಿಪರ ರೈತರಾಗಿ ತಾಲೂಕಿನಲ್ಲಿ ಗುರುತಿಸಿಕೊಂಡಿದ್ದರು.