i
ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಜರುಗಲಿರುವ ಕೃಷಿ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಸಹಯೋಗದೊಂದಿಗೆ ಕೃಷಿ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾಲಯದ ನೂತನ ಯೋಜನೆ/ಕಾರ್ಯಕ್ರಮಗಳ ಚಾಲನೆ ಹಾಗೂ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 31 ರಂದು ಹಮ್ಮಿಕೊಳ್ಳಲಾಗಿದೆ.
ರೈತ ಶಕ್ತಿ : ರಾಜ್ಯದ ಎಲ್ಲಾ ವರ್ಗದರೈತರಿಗೆ ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಟ 05 ಎಕರೆಗೆ ರೂ.1250/- ಗಳನ್ನು ಕೃಷಿ ಯಂತ್ರೋಪಕರಣಗಳ ಬಳಕೆಯ ಪೆÇ್ರೀತ್ಸಾಹಕ್ಕೆ ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿತಗೊಳಿಸಲು ಡೀಸೆಲ್ ಗೆ 51.80 ಲಕ್ಷ ಫಲಾನುಭವಿಗಳಿಗೆ ರೂ.383.15 ಕೋಟಿಗಳ ಸಹಾಯಧನ.
ಭೂರಹಿತ ಕೃಷಿ ಕಾರ್ಮಿಕ ಹಾಗೂ ರೈತರ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ : ರೈತರ/ಕೃಷಿ ಕಾರ್ಮಿಕರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪೋತ್ಸಾಹಿಸಲು 8 ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಹಾಗೂ 10ನೇ ತರಗತಿ ನಂತರದ ಶಿಕ್ಷಣಕ್ಕೆ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ರೂ. 2000/- ರಿಂದ ರೂ.11000/-ಗಳವರೆಗೆ (Direct Benefit Transfer-DBT) ಪದ್ಧತಿಯ ಮೂಲಕ 4.55 ಲಕ್ಷ ಮಕ್ಕಳಿಗೆ ರೂ. 241.86 ಕೋಟಿಗಳಷ್ಟು ವಿದ್ಯಾರ್ಥಿ ವೇತನದ ನೇರ ನಗದು ವರ್ಗಾವಣೆ.
ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿ : ರಾಜ್ಯದ ಕೃಷಿ ಮತ್ತು ಸಂಬಂಧಿತ ಕ್ಷೇತ್ರದಲ್ಲಿ ವಿನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿದ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾ ಮನೋಭಾವನೆಯನ್ನು ಬೆಳೆಸಿದ ರೈತರಿಗೆ ಕೃಷಿ ಪ್ರಶಸ್ತಿ ಗಳನ್ನು ಪ್ರದಾನಿಸಿ ಸನ್ಮಾನಿಸುವುದು.
ಕೃಷಿ ಸಂಜೀವಿನಿ : ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಉತ್ಪಾದನೆಗೆ ಪ್ರಮುಖವೆನಿಸಿರುವ ಮಣ್ಣು – ಮತ್ತು ನೀರಿನ ಪರೀಕ್ಷೆ, ಕೀಟ ಮತ್ತು ರೋಗಗಳನ್ನು ಪತ್ತೆಹಚ್ಚುವಿಕೆ ಹಾಗೂ ನಿಯಂತ್ರಣಾ ಕ್ರಮಗಳ ಕುರಿತು ಮಾಹಿತಿಯನ್ನು ರೈತರ ಕ್ಷೇತ್ರ ಭೇಟಿಯ ಮೂಲಕ ನೀಡುವುದಕ್ಕೆ ರೂ.11.52 ಕೋಟಿ ಅನುದಾನದಲ್ಲಿ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳ ಲೋಕಾರ್ಪಣೆ.
ಮುಖ್ಯಮಂತ್ರಿಗಳ ನೈಸರ್ಗಿಕ ಕೃಷಿ : ನೈಸರ್ಗಿಕ ಕೃಷಿಯಲ್ಲಿ ರೈತರನ್ನು ಪ್ರೇರೆಪಿಸಲು ಹಾಗೂ ತೊಡಗಿಕೊಳ್ಳಲು ರಾಜ್ಯದ ಎಲ್ಲಾ ಕೃಷಿ/ತೋಟಗಾರಿಕಾ ವಿಶ್ವವಿದ್ಯಾನಿಲಯಗಳಲ್ಲಿ ತಲಾ 1000 ಎಕರೆ ಪ್ರದೇಶದಲ್ಲಿ ಸಂಶೋಧನೆ ಹಾಗೂ ಸಹಾಯಧನಕ್ಕಾಗಿ ರೂ.10 ಕೋಟಿ ಅನುದಾನ.
ಡಾ: ಎಸ್.ಎ.ಪಾಟೀಲ್ ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಲೋಕಾರ್ಪಣೆ : ಡಾ: ಎಸ್.ವಿ.ಪಾಟೇಲು ದೇಶ ಕಂಡ ಶ್ರೇಷ್ಠ ಕೃಷಿ ವಿಜ್ಞಾನಿಗಳು ಹಾಗೂ ಗಾಂಧಿವಾದಿಗಳು. ಇವರು ಜನಿಸಿ, ದಿನಾಂಕ: 25.02.2023 ಕ್ಕೆ ನೂರು ವರುಷಗಳು ತುಂಬುವ ಪ್ರಯುಕ್ತ ಇವರ ಉತ್ತಮ ಸಾಧನೆಯನ್ನು ಗಮನಿಸಿ ಕರ್ನಾಟಕ ರಾಜ್ಯ ಸರ್ಕಾರವು ಇವರ ಹೆಸರಿನಲ್ಲಿ ಪೀಠವನ್ನು ಸ್ಥಾಪಿಸಿ, ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿರುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.