i
ಪೊಲೀಸ್ ದೂರು ಪ್ರಾಧಿಕಾರ ಸದಸ್ಯರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಪರ ಪೊಲೀಸ್ ಅಧೀಕ್ಷಕರು, ಪೊಲೀಸ್ ಅಧೀಕ್ಷಕರು ಮತ್ತು ಮೇಲಿನ ಹಂತದ ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವನ್ನು ರಚಿಸಲಾಗಿರುತ್ತದೆ. ಸದರಿ ಪ್ರಾಧಿಕಾರಕ್ಕೆ ಇತರೆ ಸದಸ್ಯರನ್ನೊಳಗೊಂಡಂತೆ ನಾಗರೀಕ ಸಮಾಜದಿಂದ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲಾಗುವುದು.
ನಾಗರೀಕ ಸಮಾಜದಿಂದ ಸದಸ್ಯರ ಹುದ್ದೆಗೆ ಅರ್ಜಿ ಸಲ್ಲಿಸುವ ಸದಸ್ಯರು ಶೈಕ್ಷಣಿಕ, ಆರೋಗ್ಯ ಮತ್ತು ಬಡತನ ನಿರ್ಮೂಲನೆಯಂತಹ ಜನೋಪಕಾರಿ ಸಾಮಾಜಿಕ ಸೇವೆಗಳನ್ನು ಸಲ್ಲಿಸಿರಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ಸೈದ್ಧಾಂತಿಕ ಗುಂಪಿನೊಂದೊಗೆ ಗುರುತಿಸಿಕೊಳ್ಳದವರಾಗಿರಬೇಕು.
ಆಸಕ್ತ ಸಾರ್ವಜನಿಕರು ಪ್ರಕಟಣೆಗೊಂಡ ದಿನಾಂಕದಿಂದ 15 ದಿನಗಳೊಳಗಾಗಿ ಸರ್ಕಾರದ ಅಪರ ಮುಖ್ಯ ಕಾರ್ಯಧರ್ಶಿ, ಒಳಾಡಳಿತ ಇಲಾಖೆ, ಕೊಠಡಿ ಸಂಖ್ಯೆ: 222, 2ನೇ ಮಹಡಿ, ವಿಧಾನಸೌಧ, ಬೆಂಗಳೂರು ಇಲ್ಲಿಗೆ ವೈಯಕ್ತಿಕ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು http://www.karnataka.gov.in.spca ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ ಎಂದು ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು-ಬಿ) ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.