i
ಭರಂಪುರ ಕೃಷಿ ಪತ್ತಿನ ಸಹಕಾರ ಸಂಘ ಸುಧಾಕರ್ ತೆಕ್ಕೆಗೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಮಂಗಲ ಗ್ರಾಮದ ಭರಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು ೧೨ ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಕ್ಷೇತ್ರದ ಮಾಜಿ ಸಚಿವ ಡಿ.ಸುಧಾಕರ್ ರವರ 8 ಜನ ಬೆಂಬಲಿಗರು ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಡಿ.ಸುಧಾಕರ್ ರವರ ಬೆಂಬಲಿಗರಾದ 8 ಜನ ಬೆಂಬಲಿತರು ಚುನಾವಣೆಯಲ್ಲಿ ವಿಜೇತರಾಗುವ ಮೂಲಕ ಸುಧಾಕರ್ ಗೆ ರಾಜಕೀಯ ಶಕ್ತಿ ಆಗಮಿಸಿ ಮಾಜಿ ಸಚಿವರಾದ ಡಿ.ಸುಧಾಕರ್ ರವರನ್ನು ಭೇಟಿ ಮಾಡಿ, ಅವರಿಗೆ ಪುಷ್ಪಮಾಲೆ ಹಾಕಿ, ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಪ್ರಕಾಶ್, ಕಣುಮೇಶ್, ಹನುಮಂತಪ್ಪ, ಸಣ್ಣಮ್ಮ ಮಹೇಶ್, ಶಾಂತಮ್ಮ ಗೋಪಾಲರೆಡ್ಡಿ, ಅಚ್ಚುತರಾಯ್, ಲಕ್ಷ್ಮಿ.ಎಸ್.ಎನ್ ಸಿದ್ದಪ್ಪ, ಗುರುಸಿದ್ದಪ್ಪ, ಮುಖಂಡರುಗಳಾದ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಲ್ಲಹಟ್ಟಿ ತಿಪ್ಪೇಸ್ವಾಮಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕಲ್ಲಹಟ್ಟಿ ಹರೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ್, ಪ್ರಚಾರ ಸಮಿತಿ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಪಂಚಾಯಿತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಣುಮಪ್ಪ, ಸಿದ್ದಾಭೋವಿ, ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು.