i
ಹಿರಿಯೂರಿನಲ್ಲಿ ರಂಗೇರುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ-ಮಹೇಶ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬಲಪಡಿಸಬೇಕು ಇದಕ್ಕೆ ಕಾರ್ಯಕರ್ತರು ಒಗ್ಗಟ್ಟಿನಿಂದ ಸಿದ್ದರಾಗಿ ಎಂದು ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಕರೆ ನೀಡಿದರು.
ನಗರದ ಕೆಆರ್.ಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಪ್ರಥಮ ಸಭೆ ನಡೆಸಿ ಮಾತನಾಡಿದರು.
ಡಾ ಬಿಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಹಲವಾರು ತೊಡಕುಗಳನ್ನು ನಿಭಾಯಿಸಿಕೊಂಡು ಕೆಲಸ ಕಾರ್ಯಗಳನ್ನು ಮಾಡಲು ಅವಕಾಶವಿದೆ. ಸಂವಿಧಾನದಲ್ಲಿ ಇಂತಹ ಅವಕಾಶ ಇದ್ದರೂ ನಮ್ಮ ರಾಜಕಾರಣಿಗಳು ಇಚ್ಛಾಶಕ್ತಿ ಮರೆತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ.
ತಾಲೂಕಿನ ನಾಗರೀಕರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಪಕ್ಷವನ್ನು ಬಲಪಡಿಸಬೇಕು ಎಂದು ತಿಳಿಸಿದರು.
ಈ ಕ್ಷೇತ್ರದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಮೂಲಕ ಕೆಆರ್ ಪಿ ಪಕ್ಷದ ವಿಜಯ ಪತಾಕೆಯನ್ನು ಹಾರಿಸಬೇಕು ಹಾಗೆಯೇ ಫೆಬ್ರವರಿ 4 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಕೆಆರ್ ಪಿ ಪಕ್ಷದ ಬೃಹತ್ ಬಹಿರಂಗ ಸಮಾವೇಶವನ್ನು ಯಶಸ್ವಿಯಾಗಿ ನಡೆಸಲು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ನರೇಂದ್ರ ಬಾಬು, ರಾಧಾಕೃಷ್ಣ, ಮಂಜಣ್ಣ, ಹನುಮಂತ ರೆಡ್ಡಿ, ತಿಪ್ಪೇಸ್ವಾಮಿ, ಸಿದ್ದೇಶ್, ಮಲ್ಲೇಶ್, ಮಂಜಣ್ಣ, ಕರಿಯಪ್ಪ, ಕೆಂಚಪ್ಪ, ನಂದಿಹಳ್ಳಿ ರಂಗಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.