i
ನವೋದಯ 6ನೇ ತರಗತಿ ಪ್ರವೇಶಕ್ಕೆ ಫೆ.8ರವರೆಗೆ ಅರ್ಜಿ ಸಲ್ಲಿಸಲು ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ 2023-24ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಫೆಬ್ರವರಿ 8 ರವರಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ www.navodaya.gov.in ವೆಬ್ಸೈಟ್ನಲ್ಲಿ ಸಲ್ಲಿಸಬಹುದಾಗಿದೆ ಎಂದು ಹಿರಿಯೂರು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ತಿಳಿಸಿದ್ದಾರೆ.