i
ಫೆ-6 ರ ಪ್ರಜಾಧ್ವನಿಗೆ ಭರ್ಜರಿ ಸಿದ್ಧತೆ, ಸುಧಾಕರ್ ನೇತೃತ್ವದಲ್ಲಿ ಸಭೆ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಫೆಬ್ರವರಿ ೬ ರಂದು ನಗರದ ನೆಹರು ಮೈದಾನದಲ್ಲಿ ಪ್ರಜಾಧ್ವನಿ ಕಾರ್ಯಕ್ರಮದ ಬೃಹತ್ ಸಭೆ ನಡೆಯುವ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಕಾರ್ಯಕ್ರಮಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಕೇಂದ್ರ ಮಂತ್ರಿ ಮುನಿಯಪ್ಪ, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ, ಇನ್ನು ಮುಂತಾದ ರಾಜ್ಯಮಟ್ಟದ ಮುಖಂಡರು ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಆಡಳಿತ ನೆಡೆಸುತ್ತಿರುವ ಬಿ.ಜೆ.ಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಎಲ್ಲಾ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿವೆ. ೧೩೦ ರಿಂದ ೧೪೦ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಜಯಗಳಿಸಲಿದ್ದು, ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಅವರು ಹೇಳಿದರು.
ಹಿರಿಯೂರು ನಲ್ಲಿ ನಿಮ್ಮೆಲ್ಲರ ಸಹಕಾರದಿಂದ ಕಾಂಗ್ರೆಸ್ ಪರವಾಗಿ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದ್ದು, ಪ್ರತಿ ಮುಖಂಡರು ತಮ್ಮ ಬೂತ್ ಗಳಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಲೀಡ್ ಕೊಡಿಸಬೇಕೆಂದರು.
ಫೆಬ್ರವರಿ ೬ ರಂದು ೧೦ಗಂಟೆಗೆ ಕೆ.ಪಿ.ಸಿ.ಸಿ ಅಧ್ಯಕ್ಷರು, ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಆಗಮಿಸುವುದರಿಂದ ತಾಲೂಕಿನ ಪ್ರತಿಗ್ರಾಮ ಹಾಗೂ ನಗರದ ಎಲ್ಲಾ ವಾರ್ಡ್ ಗಳಲ್ಲಿಂದ ೯ ಗಂಟೆಗೆ ಸರಿಯಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರುಗಳು ಈ ಸಭೆಗೆ ತಪ್ಪದೇ ಆಗಮಿಸಬೇಕು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿಗೌಡ, ಕೆ.ಪಿ.ಸಿ.ಸಿ ಸದಸ್ಯರಾದ ಎ.ಎಂ.ಅಮೃತೇಶ್ವರಸ್ವಾಮಿ, ಕಂದಿಕೆರೆ ಸುರೇಶ್ ಬಾಬು, ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಲ್ಲಹಟ್ಟಿ ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಗೀತಾ ಗಂಗಾಧರ್, ಮಾಜಿ ನಗರಸಭಾ ಅಧ್ಯಕ್ಷೆ ಶಿವರಂಜಿನಿ, ಬಿ.ಎನ್.ಪ್ರಕಾಶ್, ಈ.ಮಂಜುನಾಥ್, ಎಸ್.ಸಿ ಘಟಕ ಅಧ್ಯಕ್ಷ ಚಂದ್ರನಾಯ್ಕ, ಪ್ರಚಾರ ಸಮಿತಿ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಾಗೇಂದ್ರನಾಯ್ಕ, ರಾಜ್ಯ ಒ.ಬಿ.ಸಿ ಉಪಾಧ್ಯಕ್ಷ ಎಸ್.ಆರ್.ತಿಪ್ಪೇಸ್ವಾಮಿ, ಮಾಜಿ ತಾ.ಪಂ. ಅಧ್ಯಕ್ಷ ಪ್ರವೀಣ್, ಗೌನಹಳ್ಳಿ ಚಂದ್ರಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫಕೃದ್ದೀನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರೇಖಾಮಣಿ, ಸೇವಾದಳ ಜಿಲ್ಲಾ ಅಧ್ಯಕ್ಷ ಭೂತೇಶ್, ಇಂದಿರಾ, ನಗರಸಭಾ ಸದಸ್ಯರಾದ ರತ್ನಮ್ಮ, ಮಮತ, ಜಿಲ್ಲಾ ಎಸ್.ಟಿ ಘಟಕ ಪ್ರಧಾನ ಕಾರ್ಯದರ್ಶಿ ಚಿದಾನಂದಸ್ವಾಮಿ, ಕಲ್ಲಹಟ್ಟಿ ಹರೀಶ್, ಸೊಂಡೇಕೆರೆ ನಾಗರಾಜ್, ವಿ.ಕೆ.ಗುಡ್ಡ ಮಹಲಿಂಗಪ್ಪ, ಬೋರನಕುಂಟೆ ಜೀವೇಶ್, ಕೃಷ್ಣಪುರ ಕೃಷ್ಣ, ಎಸ್.ಟಿ.ಘಟಕ ಅಧ್ಯಕ್ಷ ಗಿರೀಶ್, ಮತ್ತಿತರ ಮುಖಂಡರುಗಳು ಉಪಸ್ಥಿತರಿದ್ದರು.