i
ದೈಹಿಕ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಬಹುಮುಖ್ಯ-ಸಚಿನ್ ಗೌಡ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆಗಳು ಬಹಳ ಪ್ರಾಮುಖ್ಯತೆ ವಹಿಸುತ್ತವೆ ಎಂದು ಬಸವರಾಜ್ ಎಜುಕೇಷನ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಸ್. ಬಿ. ಸಚಿನ್ ಗೌಡ ಹೇಳಿದರು.
ನಗರದ ಹೊರವಲಯದಲ್ಲಿರುವ ಬಸವರಾಜ್ ಎಜುಕೇಷನ್ ಸಂಸ್ಥೆ ಆವರಣದಲ್ಲಿ ಬಸವರಾಜ್ ಕಾಲೇಜು ಆಫ್ ಅಲೈಡ್ ಹೆಲ್ತ್ ಅಂಡ್ ಪ್ಯಾರಾ ಮೆಡಿಕಲ್ ಸೈನ್ಸಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಿ.ಬಸವರಾಜ್ ಸ್ಮರಣಾರ್ಥ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಮಹತ್ವವಿದ್ದು, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆ, ಕ್ರೀಡೆ ಮತ್ತು ಇನ್ನಿತರ ಕಾರ್ಯಗಳಲ್ಲಿ ಭಾಗವಹಿಸುವುದನ್ನು ಮೈಗೂಡಿಸಿಕೊಳ್ಳಬೇಕು ಎಂದರಲ್ಲದೆ,
ಮನುಷ್ಯನಿಗೆ ಸದೃಢ ದೇಹ ಮತ್ತು ಸದೃಢ ಮನಸ್ಸು ನಿರ್ಮಾಣವಾಗಲು ಕ್ರೀಡೆಗಳು ಸಹಕಾರಿಯಾಗುತ್ತವೆ, ಕ್ರೀಡೆಗಳಿಂದ ಹಲವಾರು ಮೌಲ್ಯಗಳು ಬಳುವಳಿಯಾಗಿ ದೊರಕುತ್ತವೆ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಸಿ.ಸಂದೀಪ್ ಯಾದವ್ ವಹಿಸಿದ್ದರು. ಈ ಸಂದರ್ಭದಲ್ಲಿ ನಸಿಂಗ್ ಕಾಲೇಜಿನ ಪ್ರಾಂಶುಪಾಲ ಮುನಿಸ್ವಾಮಿ, ಟ್ರಸ್ಟಿಗಳಾದ ಶ್ರೀರಂಗಪ್ಪ, ಉಪನ್ಯಾಸಕರಾದ ರಾಧಿಕಾ, ದಿವ್ಯಶ್ರೀ, ಲಾವಣ್ಯ, ವರಲಕ್ಷ್ಮೀ, ಕೀರ್ತನಾ, ಹರ್ಷಿತಾ, ಅಮಿತಾ, ದಿವ್ಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.