i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ ಹಾಗೂ ತಾಲ್ಲೂಕಿನ ವಡಗೇರಾ ಗ್ರಾಮದಲ್ಲ ಫೆಬ್ರವರಿ 6 ಹಾಗೂ 7 ರಂದು ಸಮಾಜ ಕಲ್ಯಾಣ ಹಾಗೂ ಹಿಂದುಳದ ವರ್ಗಗಳ ಕಲ್ಯಾಣ ಸಚಿವರ ನಡೆ ಹಾಸ್ಟೆಲ್ ಕಡ’ ಕಾರ್ಯಕ್ರಮ ನಡೆಯಲಿದೆ. ಸಚಿವರು, ಶಾಸಕರು, ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಫೆಬ್ರವರಿ 6 ರಂದು ವಡಗೇರಾ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವಾಸ್ತವ್ಯ ಮಾಡಅದ್ದು, ಅಂದು ಬೆಳಗ್ಗೆ ವಸತಿ ಶಾಲೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಎಸ್ಪಿಎಸ್ ಪಿ / ಟಿಎಸ್ಪಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಿವಿಧ ಅಭಿವೃದ್ಧಿ ನಿಗಮಗಳು, ಕ್ರೈಸ್ ವಸತಿ ಶಾಲೆಗಳಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ ಸುತ್ತಮುತ್ತಲಿನ ಗ್ರಾಮದಲ್ಲಿನ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿ ಮಾಡಿ ಅನುμÁ್ಠನದಲ್ಲಿನ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದಾರೆ.
ಅಂದು ಸಾಯಂಕಾಲ ವಸತಿ ಶಾಲಾ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ, ವಸತಿ ಶಾಲೆಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಮರುದಿನ ಬೆಳಗ್ಗೆ ವಿದ್ಯಾರ್ಥಿಗಳ ಯೋಗ ಮತ್ತು ಕರಾಟೆ ಸ್ವಯಂರಕ್ಷಣಾ ಕಲೆ ಪ್ರದರ್ಶನವನ್ನು ವೀಕ್ಷಿಸಿ, ಹುಣಸಗಿ ತಾಲ್ಲೂಕಿನ, ಮುದಲೂರು ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲ ಭಾಗಿಯಾಗಲಿದ್ದಾರೆ.