i
ಎಲ್ಲ ವರ್ಗದ ಮಕ್ಕಳಿಗೆ ಕೆಎಎಸ್ ಐಎಎಸ್ ಉಚಿತ ತರಬೇತಿ, ಕೆಲವೇ ಸೀಟು ಲಭ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಜಂಬೂದ್ವೀಪ ಕರ್ನಾಟಕ ವತಿಯಿಂದ ಚಿತ್ರದುರ್ಗದ ಮಹಾತ್ಮ ಫುಲೆ ಅಧ್ಯಯನ ಕೇಂದ್ರವು ಕೆಎಎಸ್, ಐಎಎಸ್, ಪೊಲೀಸ್, ಬ್ಯಾಂಕಿಂಗ್ ಸೇರಿದಂತೆ ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವ ಮೂಲಕ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ಮುಂದಾಗಿದೆ.
ಫೆಬ್ರವರಿ 9 ರಿಂದ ಚಿತ್ರದುರ್ಗದ ಮಹಾತ್ಮ ಫುಲೆ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಅಕ್ಕಾ ಐಎಎಸ್ ಐಎಎಸ್ ಅಕಾಡೆಮಿ ಸಹಯೋಗದಲ್ಲಿ ವಿದ್ಯಾವಂತ ಯುವಕ ಮತ್ತು ಯುವತಿಯರಿಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ಮತ್ತು ನೆರೆಯ ಯುವಕರು ಇಲ್ಲಿ ಉಚಿತ ತರಬೇತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಹಾಗೂ ಶಿಕ್ಷಕ ರಾಮಣ್ಣ ತಿಳಿಸಿದ್ದಾರೆ.
ಕ್ರಿಯಾಶೀಲ ಮನಸ್ಸಿನ ಯುವಕರ ತಂಡ ರಚಿಸಿಕೊಂಡು ತರಬೇತಿ ನೀಡುವ ಮೂಲಕ ಈ ಭಾಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ನೆರವು ನೀಡಲು ಶ್ರಮಿಸುತ್ತಿದ್ದೇವೆ. ಕೆಎಎಸ್, ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತರಬೇತಿ ನೀಡಲು ಸಂಸ್ಥೆ ಸದಾ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.